Hubli: ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಶಿಕ್ಷೆ ಆಗಲೇಬೇಕು : ಅಬ್ದುಲ್ ಅಜೀಮ್
1 min read
ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಶಿಕ್ಷೆ ಆಗಲೇಬೇಕು : ಅಬ್ದುಲ್ ಅಜೀಮ್
ಹುಬ್ಬಳ್ಳಿ: ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಶಿಕ್ಷೆ ಆಗಲೇಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವೆಲ್ಲರೂ ಒಂದೇ ತಾಯಿಯ ಮಕ್ಕಳು ಎಂದು ಭಾವಿಸಿದ್ದೇವೆ. ಕೆಲವರಿಗೆ ಶಾಂತಿ ಸೌಹಾರ್ದತೆ ಇರಬಾರದು ಎಂಬ ಭಾವನೆಯಿದೆ. ಹೀಗಾಗಿ ಈ ದುಷ್ಕೃತ್ಯ ಮಾಡಿದ್ದಾರೆ. ಇದರಿಂದ ದೇಶ, ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ ಎಂದರು.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ಹಾಗೂ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಘಟನೆ ಬಳಿಕ ಸದ್ಯ ಹುಬ್ಬಳ್ಳಿಯಲ್ಲಿ ಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದರು.
ಏ. 16ರಂದು ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಇಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಗಲಭೆ ಕುರಿತು ಮಾಹಿತಿ ಪಡೆದರು. ನಂತರ ಗಲಭೆ ವೇಳೆ ಕಲ್ಲು ಎಸೆದ ದಿಡ್ಡಿ ಹನುಮಂತ ದೇವಸ್ಥಾನ, ಆಸ್ಪತ್ರೆ ಹಾಗೂ ಗಲಭೆ ನಡೆದ ಸುತ್ತ ಮುತ್ತಲಿನ ಸ್ಥಳಗಳಿಗೆ ಅಜೀಮ್ ಅವರು ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ. ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಹಾಗೂ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ.ಎನ್.ಆರ್. ಪುರುಷೋತ್ತಮ್ ಇದ್ದರು.