“ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ” : ಟ್ವಿಟ್ಟರ್ ನಲ್ಲಿ ಅಭಿಯಾನ #karnatakaJobsForkannadigas
ಬೆಂಗಳೂರು : ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ ಎಂಬ ಅಭಿಯಾನ ಮತ್ತೆ ಮುನ್ನಲೆಗೆ ಬಂದಿದೆ. ಟ್ವಿಟ್ಟರ್ ನಲ್ಲಿ ಈ ಅಭಿಯಾನಕ್ಕೆ ಸಖತ್ ರೆಸ್ಪಾನ್ಸ್ ಸಿಗುತ್ತಿದೆ. ಸದ್ಯ ಟ್ವಿಟ್ಟರ್ನಲ್ಲಿ ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ’ ಟ್ರೆಂಡಿಂಗ್ ಆಗಿದೆ.
#karnatakaJobsForkannadigas ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಅಭಿಯಾನ ನಡೆಯುತ್ತಿದೆ. ಸಾಕಷ್ಟು ಜನ ಕನ್ನಡಿಗರು ಈ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗ ನೀಡಿ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕನ್ನಡಿಗರು ಕರ್ನಾಟಕದಲ್ಲಿ ಕೆಲಸ ಮಾಡದೇ ಇನ್ನೇನು ಪಕ್ಕದ ಮನೆಯಲ್ಲಿ ಭಿಕ್ಷೆ ಬೇಡಬೇಕಾ..? ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗದಲ್ಲಿ ಶೇಕಡಾ %50 ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎಂದು ಕನ್ನಡಿಗರು ಆಗ್ರಹಿಸುತ್ತಿದ್ದಾರೆ.