Karnataka Budget 2022 : ನಾಳೆ ಬೆಳಗ್ಗೆ ದೆಹಲಿಗೆ ಹೋಗುತ್ತಿದ್ದೇನೆ : ಜಲ ಯೋಜನೆಗಳ ಬಗ್ಗೆ ಚರ್ಚೆ ನಡೆಸ್ತೇನೆ – ಬೊಮ್ಮಾಯಿ
2022 ರ ರಾಜ್ಯ ಬಜೆಟ್ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾಳೆ ಬೆಳಗ್ಗೆ ದೆಹಲಿಗೆ ಹೋಗುತ್ತಿದ್ದೇನೆ. ಸಂಸದರ ಜತೆ ಸಭೆ ನಡೆಸ್ತೇನೆ. ಕೇಂದ್ರದ ಸಚಿವರ ಜತೆ ಜಲ ಯೋಜನೆಗಳ ಬಗ್ಗೆ ಚರ್ಚೆ ನಡೆಸ್ತೇನೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಗೆ ಸಮಯ ಕೇಳಿದ್ದೇನೆ. ಅಲ್ಲಿ ಬಜೆಟ್, ಹಣಕಾಸು, ಜಿಎಸ್ಟಿ ಬಗ್ಗೆ ಚರ್ಚೆ ನಡೆಸ್ತೇನೆ ಎಂದು ಹೇಳಿದ್ದಾರೆ..
ಅಲ್ಲದೇ ಪಕ್ಷದ ವರಿಷ್ಠರ ಸಮಯವನ್ನೂ ಕೇಳಿದ್ದೇನೆ. ವರಿಷ್ಠರು ಸಂಸತ್ ಅಧಿವೇಶನ ಹಾಗೂ ಯುಪಿ ಚುನಾವಣೆಯಲ್ಲಿ ಬ್ಯುಸಿ ಇದ್ದಾರೆ. ಇವತ್ತು ಸಂಜೆ ಯಾರೆಲ್ಲರ ಭೇಟಿಗೆ ಸಮಯ ಸಿಗುತ್ತೆ ಅಂತ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.. ಇದೇ ವೇಳೆ ಗಾನಕೋಗಿಲೆ ಲತಾ ಮಂಶೇಶ್ಕರ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ ಸಿಎಂ ಅವರ ಹಾಡುಗಳು ಕೇವಲ ಸಿನಿಮಾಕ್ಕೆ ಸೀಮಿತವಾಗಿರಲಿಲ್ಲ. ಭಜನೆಗಳು, ದೇಶಭಕ್ತಿ ಗೀತೆಗಳು, ದೇವರ ಗೀತೆಗಳನ್ನು ಹಾಡಿದ್ದಾರೆ. ಯೇ ಮೇರೆ ವತನ್ ಕಿ ಲೋಗೋ ಹಾಡು ಇವತ್ತಿಗೂ ಕೇಳಿದ್ರೆ ದೇಶಭಕ್ತಿ ಉಕ್ಕಿಹರಿಯುತ್ತೆ.
ಈ ಹಾಡು ಹಿಮಾಲಯದಷ್ಟೇ ಚಿರಸ್ಥಾಯಿ. ಲತಾ ಮಂಗೇಶ್ಕರ್ ಕನ್ನಡದಲ್ಲೂ ಹಾಡಿದ್ದಾರೆ. ಅವರಿಗೆ ಕನ್ನಡದ ನಂಟೂ ಇತ್ತು. ನಮ್ಮೆಲ್ಲರಿಗೂ ಅಪಾರ ದು:ಖವಾಗಿದೆ. ಭಾರತದ ಕೋಗಿಲೆ ಹಾಡೋದನ್ನು ನಿಲ್ಲಿಸಿದೆ. ಇಡೀ ಭಾರತ ದು:ಖದಲ್ಲಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರು ಸಾರಸ್ವತ ಲೋಕದಲ್ಲಿ ಸದಾ ಮಿನುಗುತ್ತಿರುತ್ತಾರೆ ಎಂದಿದ್ದಾರೆ..