Karntaka Election 2023 : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ವರುಣಾದಲ್ಲಿ ಸಿದ್ದು ನಿಲುಗಡೆ ಖಚಿತ….
ಕರ್ನಾಟಕ ವಿಧಾನಸಭೆ ಚುನಾವಣೆ – 2023ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ನಿರೀಕ್ಷೆಯಂತೆ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸುವ ಕ್ಷೇತ್ರದ ಕುರಿತ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಆದರೇ ಕೊಲಾರ ಮತ್ತು ಹಿಂದಿನ ಕ್ಷೇತ್ರ ಬಾದಾಮಿ ಅಭ್ಯರ್ಥಿಯ ಹೆಸರನ್ನ ಇನ್ನೂ ಘೋಷಣೆ ಮಾಡದಿರುವುದ ಕುತೂಹಲಕ್ಕೆ ಕಾರಣವಾಗಿದೆ.
ಡಿ.ಕೆ ಶಿವಕುಮಾರ್ ಕನಕಪುರ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್ ಅವರಿಗೆ ಬಬಲೇಶ್ವರ ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಚನ್ನಪಟ್ಟಣ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲ ಇನ್ನೂ ಹಾಗೆಯೇ ಉಳಿದುಕೊಂಡಿದೆ.
ದೇವನಹಳ್ಳಿಯಿಂದ ಮುನಿಯಪ್ಪಗೆ ಟಿಕೆಟ್, ಬೆಂಗಳೂರು ರಾಜಾಜಿನಗರದಲ್ಲಿ ಪುಟ್ಟಣ್ಣ, ಆರ್ ಆರ್ ನಗರ ಕುಸುಮಾ ಹೆಚ್, ನರಸಿಂಹರಾಜ ತನ್ವಿರ್ ಸೇಠ್ಗೆ ಟಿಕೆಟ್ ಘೋಷಣೆಯಾಗಿದೆ. ದೇವನಹಳ್ಳಿಯಿಂದ ಮುನಿಯಪ್ಪಗೆ ಟಿಕೆಟ್, ಬೆಂಗಳೂರು ರಾಜಾಜಿನಗರದಲ್ಲಿ ಪುಟ್ಟಣ್ಣ, ಆರ್ ಆರ್ ನಗರ ಕುಸುಮಾ ಹೆಚ್, ನರಸಿಂಹರಾಜ ತನ್ವಿರ್ ಸೇಠ್ಗೆ ಟಿಕೆಟ್ ಘೋಷಣೆಯಾಗಿದೆ.
ಯಮಕನಮರಡಿಯಿಂದ ಸತೀಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣದಿಂದ ಲಕ್ಷ್ಮಿ ಹೆಬ್ಬಾಳ್ಕರ್, ಖಾನಾಪುರದಿಂದ ಡಾ. ಅಂಜಲಿ ನಿಂಬಾಳ್ಕರ್, ಬೈಲಹೊಂಗಲದಿಂದ ಮಹಾಂತೇಶ ಶಿವಾನಂದ ಕೌಜಲಗಿ, ರಾಮದುರ್ಗದಿಂದ ಅಶೋಕ್ ಎಂ.ಪಟ್ಟಣ, ಜಮಖಂಡಿಯಿಂದ ಆನಂದ ಸಿದ್ದು ನ್ಯಾಮಗೌಡ ಅವರ ಹೆಸರು ಅಂತಿಮವಾಗಿದೆ.
Karntaka Election 2023: First list of Congress candidates released; Sure to stop at Varuna.