Karwar : ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿ ಸಾವು
ಕಾರವಾರ : ಸಮುದ್ರದಲ್ಲಿ ಈಜಲು ಹೋಗಿ ಅಲೆಗಳಿಗೆ ಸಿಲುಕಿ ಪ್ರವಾಸಿಗನೋರ್ವ ಮೃತಪಟ್ಟಿರುವ ಘಟನೆ ಕಾರವಾರ ಗೋಕರ್ಣದ ಮುಖ್ಯ ಕಡಲತೀರದ ರುದ್ರಪಾದ ಬಳಿ ನಡೆದಿದೆ.
29 ವರ್ಷದ ಅಭಿಷೇಕ್ ಮೃತಪಟ್ಟಿರುವ ವ್ಯಕ್ತಿ. ಈತ ಬೆಂಗಳೂರು ಮೂಲದ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದರು.
ನಾಲ್ವರು ಸ್ನೇಹಿತರೊಂದಿಗೆ ಇವರು ಪ್ರವಾಸಕ್ಕೆ ಆಗಮಿಸಿದ್ದರು.
ಘಟನೆಯ ಬಗ್ಗೆ ಮಾಹಿತಿ ಪಡೆದ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆಗೆ ಮುಂದಾಗಿದ್ದರು.
ಆದ್ರೆ ವೇಳೆಗಾಗಲೇ ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದರು. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.