ಕೇದಾರನಾಥ ದೇಗುಲ ಓಪನ್ : ಆನ್ ಲೈನ್ ಮೂಲಕ ದರ್ಶನ
ಡೆಹ್ರಾಡೂನ್ : ಕೊರೊನಾ ಲಾಕ್ ಡೌನ್ ನಿಂದಾಗಿ ಮುಚ್ಚಿದ ಕೇದಾರನಾಥ ದೇವಾಲಯ ಇಂದು ಮತ್ತೆ ಓಪನ್ ಆಗಿದೆ.
ಇಂದು ಮುಂಜಾನೆ 5 ಗಂಟೆಗೆ ದೇವಾಲಯವನ್ನು ಉದ್ಘಾಟಿಸಲಾಯಿತು. ಉದ್ಘಾಟನಾ ಸಮಾರಂಭಕ್ಕೆ ಭಕ್ತರಿಗೆ ಪ್ರವೇಶವಿರಲಿಲ್ಲ.
ಆದರೆ ಬದಲಾಗಿ ಆನ್ ಲೈನ್ ಮೂಲಕ ದರ್ಶನ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.
ಉತ್ತರಾಖಂಡ್ ಸಿಎಂ ತಿರತ್ ಸಿಂಗ್ ರಾವತ್ ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕೇದಾರನಾಥ ದೇವಾಲಯವನ್ನು ಪುನರಾಂಭಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೇದಾರನಾಥ ದೇವಾಲಯವನ್ನು ಇಂದು ಬೆಳಗ್ಗೆ 5 ಗಂಟೆಗೆ ತೆರೆಯಲಾಯಿತು.
ಎಲ್ಲರೂ ಆರೋಗ್ಯವಾಗಿರಲು ನಾನು ಬಾಬಾ ಕೇದಾರನಾಥನನ್ನು ಪ್ರಾರ್ಥಿಸುತ್ತೇನೆ.
ಜನರು ಆನ್ ಲೌನ್ ಮೂಲಕ ದರ್ಶನ ಪಡೆಯಬಹುದು ಎಂದು ಬರೆದುಕೊಂಡಿದ್ದಾರೆ.