ನವದೆಹಲಿ : ರಾಷ್ಟ್ರ ರಾಜಧಾನಿಯ ಸಿಎಂ ಆಗಿ ಮೂರನೇ ಬಾರಿಗೆ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ರಾಮ್ಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ದೆಹಲಿ ನಿರ್ಮಾಣಕ್ಕೆ ಕಾರಣವಾದ 50 ಮಂದಿ ಪ್ರಮುಖರ ಜತೆಗೆ ಕೇಜ್ರಿವಾಲ್ ವೇದಿಕೆ ಹಂಚಿಕೊಳ್ಳಲಿದ್ದಾರೆ. ದೆಹಲಿಯ ಪ್ರಸಿದ್ಧ ಸಿಗ್ನೇಚರ್ ಬ್ರಿಡ್ಜ್ ನ ವಿನ್ಯಾಸಕಾರರು, ಶಿಕ್ಷಕರು, ಬಸ್ ಮಾರ್ಷಲ್ಗಳು, ಅಗ್ನಿಶಾಮಕ ದಳದ ಕಾರ್ಯಾಚರಣೆ ವೇಳೆ ಜೀವ ಕಳೆದುಕೊಂಡವರ ಕುಟುಂಬ ವರ್ಗ ಸೇರಿದಂತೆ ಒಟ್ಟಾರೆ 50 ಮಂದಿ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಕೇಜ್ರಿವಾಲ್ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರಿಗೆ ಆಹ್ವಾನಿಸಲಾಗಿದೆ.
ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!
ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್ನಲ್ಲಿ ಹೆಸರಿರುವ...








