ತಿರುವನಂತಪುರಂ: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇರಳ ನಾಯಕರು ಒಪ್ಪಿದ್ದಾರೆ ಎಂದು ನಾನು ಹೇಳಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಇತ್ತೀಚೆಗೆ ದೇವೇಗೌಡ ಅವರು, ಕೇರಳ ನಾಯಕರು ರಾಜ್ಯದಲ್ಲಿನ ಮೈತ್ರಿಗೆ ಒಪ್ಪಿದ್ದಾರೆ ಎಂದು ಹೇಳಿದ್ದಾರೆ ಎಂಬ ಸುದ್ದಿ ಹಬ್ಬಿದ್ದರು. ಇದಕ್ಕೆ ಕೇರಳ ಸಿಎಂ ಪಿಣರಾಜಿ ವಿಜಯನ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲಿಯೇ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ದೇವೇಗೌಡರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೇರಳ ನಾಯಕರು ಒಪ್ಪಿಕೊಂಡಿದ್ದಾರೆ ಎಂಬುವುದಾಗಿ ನಾನು ಹೇಳಿಲ್ಲ ಎಂದು ಹೇಳಿದ್ದಾರೆ.
ಸಿಪಿಎಂ ಕುರಿತ ನನ್ನ ಹೇಳಿಕೆ ಕುರಿತು ಗೊಂದಲಗಳಿವೆ. ಕಮ್ಯುನಿಸ್ಟ್ ಸ್ನೇಹಿತರು ನಾನು ಹೇಳಿದ್ದನ್ನು ಅಥವಾ ನಾನು ಹೇಳಿದ ಸಂದರ್ಭವನ್ನು ತಪ್ಪಾಗಿ ಗ್ರಹಿಸಿದ್ದಾರೆ. ಕೇರಳದ CPM ಬಿಜೆಪಿ-ಜೆಡಿಎಸ್ ಮೈತ್ರಿ ಬೆಂಬಲಿಸುತ್ತದೆ ಎಂದು ನಾನು ಹೇಳಿಲ್ಲ. ಕೇರಳದಲ್ಲಿ ನನ್ನ ಪಕ್ಷದ ಘಟಕವು 1/2 ರೊಂದಿಗೆ ಒಪ್ಪಿಕೊಂಡಿದೆ ಎಂದು ಹೇಳಿರುವುದಾಗಿ ಹೇಳಿದ್ದಾರೆ.