ಬೀದರ್: ಎಟಿಎಂಗೆ ನುಗ್ಗಿ ಮಶೀನ್ ಮುರಿದು ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಹರ್ಷಾ ಕಾಂಪ್ಲೆಕ್ಸ್ ಹತ್ತಿರ ನಡೆದಿದೆ.
ಎಟಿಎಂ ಮಶೀನ್ ಮುರಿದು 6.50 ಲಕ್ಷ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕರ್ನಾಟಕ ಬ್ಯಾಂಕ್ ನ ATMಗೆ ನುಗ್ಗಿದ ಖದೀಮರು ಗ್ಯಾಸ್ ಕಟರ್ ಬಳಸಿ ATM ಮುರಿದು ಕಳ್ಳತನ ಮಾಡಿದ್ದಾರೆ. 10 ನಿಮಿಷದಲ್ಲಿಯೇ ಹಣ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.