ಹಾವೇರಿ : ಖದೀಮರು ಕಳ್ಳತನ ಮಾಡಲು ಬಂದಾಗ, ತಮ್ಮೊಂದಿಗೆ ಬಂದಿದ್ದ ವ್ಯಕ್ತಿಯನ್ನು ಬಿಟ್ಟು ಪರಾರಿಯಾಗಿ, ಫಜೀತಿ ಅನುಭವಿಸಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿನ ಮನೆಯೊಂದಕ್ಕೆ ಬೀಗ ಹಾಕಿದ್ದನ್ನು ನೋಡಿದ್ದ ಮೂವರು ಖದೀಮರು ಕಳ್ಳತನ ಮಾಡಲು ಬಂದಿದ್ದರು. ಈ ವೇಳೆ ಓರ್ವನನ್ನು ಬಿಟ್ಟು ಇಬ್ಬರು ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ವ್ಯಕ್ತಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆಗ ಗ್ರಾಮಸ್ಥರು ದೇವಸ್ಥಾನದ ಕಂಬಕ್ಕೆ ಕಟ್ಟಿ ಆತನನ್ನು ಥಳಿಸಿದ್ದಾರೆ.
ಗ್ರಾಮದ ಸಿದ್ದಪ್ಪ ಒಡ್ಡಿಗೇರಿ ಎಂಬುವವರು ಕುಟುಂಬ ಸಮೇತರಾಗಿ ಬೇರೆ ಊರಿಗೆ ತೆರಳಿದ್ದರು. ಇದನ್ನು ಗಮನಿಸಿದ್ದ ಖದೀಮರು ಕಳ್ಳತನ ಮಾಡಲು ರಾತ್ರಿ ವೇಳೆ ಆಗಮಿಸಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳ ಚಲನ ವಲನ ಗಮನಿಸಿದ್ದ ಗ್ರಾಮದ ಕೆಲ ರೈತರು,ಕಳ್ಳರನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಓರ್ವ ಸಿಕ್ಕಿ ಬಿದ್ದಿದ್ದು, ಥಳಿಸಿದ್ದಾರೆ.