ಬೆಂಗಳೂರು: ಐರಾವತ ಬಸ್ ನಲ್ಲಿ ಖದೀಮರು ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ.
ಈ ಐರಾವತ ಬಸ್ ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ಬಸ್ ನಲ್ಲಿ ರಾಘವೇಂದ್ರ ಎಂಬುವವರು ಸಂಚಾರ ನಡೆಸುತ್ತಿದ್ದರು. ಈ ವೇಳೆ ಪ್ರಯಾಣಿಕ ರಾಘವೇಂದ್ರ ಅವರಿಗೆ ಸೇರಿದ್ದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ಬಂಗಾರದ ಕಂಠಿಹಾರ ಹಾಗೂ ಎರಡು ಉಂಗುರಗಳನ್ನು ಕಳ್ಳತನ ಮಾಡಿದ್ದಾರೆ.
ಈ ಕುರಿತು ಪ್ರಯಾಣಿಕ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಯಾಣಿಕರು ಜಾಲಹಳ್ಳಿ ಕ್ರಾಸ್ ಹತ್ತಿರ ಬಂದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.