ಬೀದರ್: ಖದೀಮರು ದೇವರಿಗೆ ಕೈ ಮುಗಿದು ನಂತರ ದೇವಸ್ಥಾನದಲ್ಲಿನ ಹುಂಡಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಉಡಬಾಳ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ಯಲ್ಲಮ್ಮ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ತೋರಿಸಿ, ಹುಂಡಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಟವೆಲ್, ಮಾಸ್ಕ್ ಧರಿಸಿಕೊಂಡು ಬಂದು ಹುಂಡಿ ಕಳ್ಳತನ ಮಾಡಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಿಸಿಟಿವಿ ಆಧಾರದ ಮೇಲೆ ತನಿಖೆ ಕೈಗೊಂಡಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದ್ದು, ಚಿಟಗುಪ್ಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.