ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

‘ಖಜುರಾಹೋ ಎಂಬ ದಿಗ್ಮೂಢತೆ’-ಭಾರತದ ಸನಾತನ ವಾಸ್ತುಶಿಲ್ಪದ ನಗ್ನತೆಯ ಮೈಥುನ ಕೆತ್ತನೆಯಾಚೆಗಿನ ಕೌತಕದ ಸಂಗತಿಗಳು:

Shwetha by Shwetha
January 22, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Saakshatv vishwa vismaya episode5
Share on FacebookShare on TwitterShare on WhatsappShare on Telegram

‘ಖಜುರಾಹೋ ಎಂಬ ದಿಗ್ಮೂಢತೆ’-ಭಾರತದ ಸನಾತನ ವಾಸ್ತುಶಿಲ್ಪದ ನಗ್ನತೆಯ ಮೈಥುನ ಕೆತ್ತನೆಯಾಚೆಗಿನ ಕೌತಕದ ಸಂಗತಿಗಳು: Saakshatv vishwa vismaya episode5

ಕ್ರಿ.ಶ ಒಂಭತ್ತನೇ ಶತಮಾನದ ಪ್ರಸಿದ್ಧ ಚಾಂಡೇಲ ರಾಜಮನೆತನದವರಿಂದ ನಿರ್ಮಾಣಗೊಂಡವೆನ್ನಲಾದ ಖಜುರಾಹೊ ದೇಗುಲಗಳು ಈಗಿನ ಮಧ್ಯಪ್ರದೇಶದ ಚಿತ್ತಾರ್‌ಪುರ ಜಿಲ್ಲೆಯಲ್ಲಿವೆ. ಆರಂಭದಲ್ಲಿ ಇಲ್ಲಿ ಎರಡು ಬೃಹತ್ತಾದ ಖರ್ಜೂರದ ಮರಗಳಿದ್ದ ಕಾರಣಕ್ಕೆ ಖರ್ಜೂರಪುರ್ ಅಥವಾ ಖರ್ಜುರಾಹೊ ಎಂಬ ಹೆಸರು ಬೆಳೆದು ಬಂತು ಎನ್ನುವ ಉಲ್ಲೇಖಗಳಿವೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

Saakshatv vishwa vismaya episode5

ಖರ್ಜೂರವಾಹಕ ಎಂಬುದು ಶಿವನ ಉಪನಾಮೆಗಳಲ್ಲೊಂದಾದ್ದರಿಂದ ಖಜುರಾಹೊ ಆಗಿ ಅದೇ ರೂಢಿಗೆ ಬಂದಿರಬಹುದೆಂಬುದು ಇನ್ನೊಂದು ವಾದವಿದೆ. Saakshatv vishwa vismaya episode5

ರಾಜಾ ನನ್ನುಕ ಅಥವಾ ಚಂದ್ರವರ್ಮನ್ ನಿಂದ ಕ್ರಿ.ಶ 831 ರಲ್ಲಿ ಸ್ಥಾಪನೆಯಾದ ಚಾಂಡೇಲ ರಾಜವಂಶವು ಅಧಿಕಾರಕ್ಕೆ ಬಂದ ಪ್ರಾರಂಭದಲ್ಲಿಯೆ ಈ ದಿವ್ಯ ದೇಗುಲಗಳ ನಿರ್ಮಾಣ ಕಾರ್ಯವನ್ನ ಶುರು ಮಾಡಿತು. ಅಂದಿಗೆ 30 ಚದರ ಕಿ.ಮಿ ವ್ಯಾಸದಲ್ಲಿ ಸುಮಾರು 87 ದೇಗುಲಗಳಿದ್ದವು. ಹದಿಮೂರನೇ ಶತಮಾನದ ದೆಹಲಿ ಸುಲ್ತಾನರ ಏಳಿಗೆಯ ನಂತರ ಅವರ ಕತ್ತಿಯೇಟಿಗೆ ಇಲ್ಲಿನ ಹಲವು ದೇಗುಲಗಳು ನಾಶವಾಗಿ ಇಂದು ಕೇವಲ 23 ದೇಗುಲಗಳು ಮಾತ್ರ ಉಳಿದಿವೆ.

Saakshatv vishwa vismaya episode5

ಖಾಂಡರೀಯ ಮಹಾದೇವ ಮಂದಿರ ಇಲ್ಲಿನ ಬೃಹತ್ ದೇಗುಲ. ಇದು ಕ್ರಿ.ಶ ಹತ್ತರಲ್ಲಿ ರಾಜಾ ವಿದ್ಯಾಧರನಿಂದ ನಿರ್ಮಾಣವಾಯ್ತು. ಅತಿ ಹೆಚ್ಚು ನಗ್ನ ಹಾಗೂ ಮಿಥುನ ಶಿಲ್ಪಗಳನ್ನ ಒಳಗೊಂಡ ದೇಗುಲ ಇದು. ಧರ್ಮ, ಅರ್ಥ, ಕಾಮ ಹಾಗೂ ಮೋಕ್ಷಗಳೆಂಬ ನಾಲ್ಕು ಜೈವಿಕ ಕರ್ಮ ಅಥವಾ ಜೀವನದ ಪಾರಮಾರ್ಥಗಳಲ್ಲಿ ನಂಬಿಕೆ ಇಟ್ಟಿದ್ದ ಭಾರತೀಯರ ಜನಜೀವನವೆ ಈ ಮಿಥುನ ಶಿಲ್ಪಗಳ ಮೂಲಕ ಜಗಜ್ಜಾಹೀರಾಗಿದೆ.

ಗಂಡು ಹೆಣ್ಣಿನ ಮಿಲನವು ಶಿವ ಶಕ್ತಿ ಎರಡರ ದಿವ್ಯ ಹಾಗೂ ಆಧ್ಯಾತ್ಮಿಕ ಸಮ್ಮಿಲನದ ಸಂಕೇತವಾಗಿ ಈ ಕೆತ್ತನೆಗಳು ರಚಿಸಲ್ಪಟ್ಟಿವೆ. ಪವಿತ್ರ ದೇವಸ್ಥಾನದ ಒಳಭಾಗಕ್ಕೆ ಕಾಲಿಡುವ ಮುನ್ನ ಮನಸಿನ ಕಲ್ಮಶ ಹಾಗೂ ಕೆಡುಕುಗಳನ್ನ ಅದರ ಬಾಗಿಲ ಬಳಿಯೆ ಬಿಟ್ಟು ಹೃದಯಶುದ್ಧತೆಯಿಂದ ಒಳ ಬರಬೇಕೆಂಬ ಪಾಠವನ್ನ ಈ ಕೆತ್ತನೆಗಳು ನಮಗೆ ತಿಳಿಸುತ್ತವೆ.

Saakshatv vishwa vismaya episode5

ಹಾಗೆಂದೆ ಇವು ಇಲ್ಲಿನ ದೇಗುಲಗಳ ಹೊರ ಕವಚದ ಮೇಲೆ ಕೆತ್ತಲ್ಪಟ್ಟಿವೆಯೆ ಹೊರತು ಒಳಗೆ ಕೆತ್ತಲ್ಪಟ್ಟಿಲ್ಲ. ಖಜುರಾಹೊ ವಿಶ್ವ ಮಾನ್ಯತೆ ಪಡೆದ ವಿಶ್ವ ಪಾರಂಪರಿಕ ತಾಣವಾಗಿ ಗುರುತಿಸಿ ಸನ್ಮಾನಿಸಲ್ಪಟ್ಟ ಭಾರತದ ಹೆಮ್ಮೆಯ ದ್ಯೋತಕ.

ಸಂಗ್ರಹ ಲೇಖನ:- ಇಂದೂಧರ್ ಒಡೆಯರ್ ಚಿತ್ರದುರ್ಗ (ಡುಗ್ಗು)
ಹವ್ಯಾಸಿ ಬರಹಗಾರ

ಸಾಕ್ಷಾ ಟಿವಿಯ ವಿಶ್ವ ವಿಸ್ಮಯ ಅಂಕಣಕಾರ ಇಂದೂದರ್ ಒಡೆಯರ್ ಚಿತ್ರದುರ್ಗ ಅವರ ಕಿರು ಪರಿಚಯ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Saakshatv vishwa vismayaSaakshatv vishwa vismaya episode5
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram