ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇತಿಹಾಸವೇ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್, ಖರ್ಗೆ ಅವರನ್ನು ಟೀಕಿಸಿದ್ದಾರೆ.
ನಗರದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸುಧಾಕರ್, ಚಾಮರಾಜನಗರದಲ್ಲಿ ಸಿಎಎ ವಿರುದ್ಧ ನಡೆದ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಮಾತನಾಡಿದ್ದಾರೆ. ಆದರೆ 1951ರಲ್ಲಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರ ಸಂವಿಧಾನವನ್ನು ತಿದ್ದುಪಡಿ ಮಾಡಿತ್ತು. ಇದನ್ನು ಖರ್ಗೆ ಅವರು ತಿಳಿದಿದ್ದರೆ ಒಳ್ಳೆಯದು ಎಂದ ಸಚಿವ ಸುಧಾಕರ್ 104 ಬಾರಿ ಸಂವಿಧಾನ ತಿದ್ದುಪಡಿ ಮಾಡಿರುವ ಕಾಂಗ್ರೆಸ್ ಸಂವಿಧಾನ ರಕ್ಷಣೆ ಮಾಡಿದೆಯೇ? ಎಂದು ಪ್ರಶ್ನಿಸಿದರು.