ಪ್ರಕೃತಿ ಮತ್ತು ಜೀವನವನ್ನು ಯಾರು ಕೂಡ ನಿಯಂತ್ರಿಸಲು ಸಾಧ್ಯವಿಲ್ಲ – ಸುದೀಪ್
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಈ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸಹ ಸಾಮಾಜಿಕ ಜಾಲತಾಣದ ಮೂಲಕ ಜಾಗೃತಿ ಮೂಡಿಸಿದ್ದಾರೆ. ಸದ್ಯದ ಪರಿಸ್ಥಿತಿ ಎಲ್ಲರಲ್ಲೂ ಒಂದು ರೀತಿಯ ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದಿನವನ್ನು ಸಂತೋಷದಿಂದ ಕಳೆಯಬೇಕು. ಪ್ರಕೃತಿ ಮತ್ತು ಜೀವನವನ್ನು ಯಾರು ಕೂಡ ನಿಯಂತ್ರಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ವಿಚಾರಿಸಲು ಸಂದೇಶ ಅಥವಾ ಕರೆ ಬರುತ್ತಿದ್ದರೇ ಅದು ಅವರಿಗೆ ನಿಮ್ಮ ಬಗ್ಗೆ ಇರುವ ಕಾಳಜಿ ಎಂದಿರುವ ಸುದೀಪ್ , ನಿಮ್ಮವರ ಕಾಳಜಿಯನ್ನು ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸಿದ್ದಾರೆ..