‘ಸಮಾಜದಲ್ಲಿ ನಾನೊಬ್ಬನೇ ವಿಲನ್ ಎಂಬ ರೀತಿಯಲ್ಲಿ ಕೆಲವರು ಬಿಂಬಿಸಿದ್ದರು’ – ‘ಆದ್ರೂ ಬೇಸರವಿಲ್ಲ’ : ಕಿಚ್ಚ
ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೇವಲ ನಟನೆಯಿಂದಷ್ಟೇ ಅಲ್ಲದೇ ಸಾಮಾಜಿಕ ಕಾರ್ಯಗಳಿಂದಲೂ, ಅವರ ವ್ಯಕ್ತಿತ್ವವದಿಂದ ಅಪಾರ ಅಭಿಮಾನಿಗಳನ್ನ ಸಂಪಾದಿಸಿದ್ಧಾರೆ. ತಮ್ಮ ಚಾರಿಟೇಬಲ್ ಟ್ರಸ್ಟ್ ಗಳ ಮೂಲಕ ಅನೇಕರಿಗೆ ತಮ್ಮ ಕೈಲಾದ ಸಹಾಯ ಮಾಡ್ತಿದ್ದಾರೆ.
ಅದ್ರಲ್ಲೂ ಇತ್ತೀಚೆಗೆ ಕೊರೊನಾ ಸಂಕಷ್ಟದ ನಡುವೆ ಅನೇಕರಿಗೆ ಸಹಾಯ ಮಾಡಿರುವ ಕಿಚ್ಚ ಸುದೀಪ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗ್ತಿದೆ. ಆದ್ರೆ ಇದರ ಜೊತೆಜೊತೆಗೆ ಕಿಚ್ಚ ಅವರ ವಿರುದ್ಧ ಪೋಸ್ಟ್ ಗಳು , ಕಮೆಂಟ್ ಗಳು ಸಹ ಹರಿದಾಡುತ್ತಿರುತ್ತೆ..
ಸುದೀಪ್, ಜೂಜಿಗೆ ಉತ್ತೇಜನ ನೀಡುವ ಜಾಹೀರಾತಿನಲ್ಲಿ ನಟಿಸಿದ್ದಾರೆ ಎಂದು ಹಲವರು ಆಕ್ಷೇಪಣೆಗಳನ್ನ ವ್ಯಕ್ತಪಡಿಸಿದ್ಧಾರೆ. ಆದ್ರೆ ಕಿಚ್ಚ ಸುದೀಪ್ ಸದಾ ಕೂಲ್ ಆಗಿಯೇ ಇರುತ್ತಾರೆ. ಎಂತಹದ್ದೇ ಪರಿಸ್ಥಿತಿಯನ್ನೂ ಸಹ ಕೂಲ್ ಆಗಿ ಹ್ಯಾಂಡಲ್ ಮಾಡುತ್ತಾರೆ.. ಸಾಮಾಇಜಿಕ ಜಾಲತಾಣಗಳಲ್ಲಿ ಇಂತಹ ಆಕ್ಷೇಪಣೆಗಳಿಗೆ ಇದೀಗ ಕಿಚ್ಚ ತಮ್ಮದೇ ಸ್ಟೈಲ್ ನಲ್ಲಿ ಉತ್ತರಿಸಿದ್ದಾರೆ.
ಮಾಧ್ಯಮದವರ ಜೊತೆಗೆ ಮಾತನಾಡಿರುವ ಕಿಚ್ಚ, ನಾವು ಹಲವಾರು ಮಂದಿಗೆ ಸಹಾಯ ಮಾಡಬೇಕು ಎಂದುಕೊಂಡಿರುತ್ತೇವೆ. ಆದರೆ ನಮಗೂ ಸಹ ಒಮ್ಮೊಮ್ಮೆ ಆರ್ಥಿಕ ಸಮಸ್ಯೆಗಳು ಎದುರಾಗಿಬಿಡುತ್ತವೆ. ನಮಗೆ ಹಣ ನೀಡಬೇಕಾದವರನ್ನು ಸಹ ಹಣ ಕೇಳದ ಪರಿಸ್ಥಿತಿ ನಿರ್ಮಾಣವಾಗಿಬಿಟ್ಟಿದೆ’ ಎಂದಿದ್ದಾರೆ .
ಅಲ್ಲದೇ ನಾನು ನನ್ನ ಸ್ವಂತ ಹಣದಿಂದಷ್ಟೆ ಜನರಿಗೆ ಸಹಾಯ ಮಾಡುತ್ತಿದ್ದೇನೆ. ನನ್ನ ಚಾರಿಟಿ ಟ್ರಸ್ಟ್ಗಳು ಸಹ ನನ್ನ ಸ್ವಂತ ಹಣದಿಂದಷ್ಟೆ ನಡೆಯುತ್ತವೆ. ಯಾರ ಬಳಿಯೂ ನಾವು ಹಣ ಪಡೆಯುವುದಿಲ್ಲ. ಹಣ ಪಡೆವ ಸಂಪ್ರದಾಯ ನಮ್ಮ ಬಳಿ ಇಲ್ಲ ಎಂದಿದ್ದಾರೆ ಸುದೀಪ್.
ನಾನು ಯಾವುದೋ ಜಾಹೀರಾತು ಮಾಡಿ ಬಂದ ಹಣ. ಯಾವುದೋ ಕಾರ್ಯಕ್ರಮದಲ್ಲಿ ಭಾಗಿಯಾದಾಗ ಬಂದ ಹಣ. ರಿಯಾಲಿಟಿ ಶೋ ನಿಂದ ಬಂದ ಹಣ ಇಂಥಹಾ ಹಣವನ್ನು ಬಳಸಿ ನಾನು ಜನರಿಗೆ ಕೈಲಾದ ಮಟ್ಟಿಗೆ ಸಹಾಯ ಮಾಡುತ್ತಿದ್ದೇನೆ ಎಂದಿದ್ದಾರೆ.
ಇದೇ ವೇಳೆ ನನಗೆ ಜಾಹೀರಾತುಗಳನ್ನು ಮಾಡಿರುವ ಬಗ್ಗೆ ಯಾವುದೇ ವಿಷಾದವಿಲ್ಲ. ಕೆಲವರು ನನ್ನ ವಿರುದ್ಧ ಬಹಳ ಟೀಕೆ ಮಾಡಿದರು. ನಾನೊಬ್ಬನೇ ಸಮಾಜದಲ್ಲಿ ವಿಲನ್ ಎಂಬ ರೀತಿಯಲ್ಲಿ ತೋರಿಸುವ ಪ್ರಯತ್ನ ಮಾಡಿದ್ರು . ಫೇಸ್ ಬುಕ್ ಲೈವ್ಗಳನ್ನು ಯಾವ ಹಂತದ ವರೆಗೆ ಬಳಸಬೇಕಾಗಿತ್ತೊ ಆ ಹಂತಕ್ಕೆ ಬಳಸಿದರು. ಆದರೆ ಇದರ ಬಗ್ಗೆ ನನಗೆ ಬೇಸರವೇನೂ ಇಲ್ಲ. ಆ ಹಣ ಬಂದಿರದೇ ಇರದಿದ್ದರೆ ನಾನು ಇಷ್ಟು ಜನಕ್ಕೆ ಸಹಾಯ ಮಾಡಲು ಆಗುತ್ತಿರಲಿಲ್ಲ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.