ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವೃದ್ಧೆಯೊಬ್ಬರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದು, ಟಿ.ನರಸೀಪುರ ತಾಲೂಕಿನ ಅಕೌಂಟ್ ಓಪನ್ ಆಗಿದೆ.
ತಾಲೂಕಿನ ಕೇತುಪುರ ಗ್ರಾಮದ 60 ವರ್ಷದ ವೃದ್ಧೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ವೃದ್ಧೆಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಧೃಡಪಟ್ಟಿತ್ತು. ಅದರೆ ತಡರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ವೃದ್ಧೆಯ ಸಾವಿನಿಂದಾಗಿ ಟಿ.ನರಸೀಪುರ ತಾಲ್ಲೂಕಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ.
ಕಲುಷಿತ ನೀರು ಕುಡಿದು ಮಹಿಳೆ ಸಾವು.
ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಕರೋಹಟ್ಟಿ ಗ್ರಾಮದಲ್ಲಿ ನಡೆದಿದೆ. ಕರೋಹಟ್ಟಿ ಗ್ರಾಮದ ಮಾದಮ್ಮ (65)ಮೃತ ದುರ್ದೈವಿ. ಗ್ರಾಮದಲ್ಲಿ ಕಲುಷಿತ ನೀರು ಕುಡಿದಿದ್ದ 50ಕ್ಕೂ ಹೆಚ್ಚು ಅಸ್ವಸ್ಥಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಾದಮ್ಮ ಸಾವನ್ನಪ್ಪಿದ್ದಾರೆ.