ಮೈಸೂರು: ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಖೈದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಜೈಲಿಗೆ ಕೊರೊನಾ ಆತಂಕ ಶುರುವಾಗಿದೆ.
ಮೈಸೂರಿನ ವಿಜಯನಗರದಲ್ಲಿ ನಡೆದಿದ್ದ ಕೊಲೆ ಮಾಡಿ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ವಿಜಯನಗರ ಪೊಲೀಸರಿಗೆ ಆರೋಪಿ ಶರಣಾಗಿದ್ದ. ಬಳಿಕ ಆತನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಮೂರು ದಿನಗಳ ಹಿಂದೆ ಆರೋಪಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ ಆರೋಪಿಗೆ ಕೊರೊನಾ ಇರುವುದು ದೃಢವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ
ಆತನ ಜೊತೆಗಿದ್ದ 20 ಖೈದಿಗಳನ್ನು ಜೈಲಿನಲ್ಲೇ ಕ್ವಾರಂಟೈನ್ ಮಾಡಲಾಗಿದೆ ಎನ್ನಲಾಗಿದೆ.
FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್ಬಾಲ್ ಕ್ರಾಂತಿ..!
ಹಾಗಂತ... ಇದು ಖಂಡಿತವಾಗಿಯೂ ಫುಟ್ಬಾಲ್ ಜಗತ್ತಿನ ಕಾಲ್ಪನಿಕ ಕಥೆಯಂತೂ ಅಲ್ಲವೇ ಅಲ್ಲ. ಬದಲಾಗಿ ಮತ್ತೊಂದು ಸಣ್ಣ ದೇಶದ ಫುಟ್ಬಾಲ್ ಆಟದ ಮಹೋನ್ನತ ಪರ್ವದ ನೈಜ ಚಿತ್ರಣ. ಒಬ್ಬ...








