ಮೈಸೂರು: ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಖೈದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಜೈಲಿಗೆ ಕೊರೊನಾ ಆತಂಕ ಶುರುವಾಗಿದೆ.
ಮೈಸೂರಿನ ವಿಜಯನಗರದಲ್ಲಿ ನಡೆದಿದ್ದ ಕೊಲೆ ಮಾಡಿ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ವಿಜಯನಗರ ಪೊಲೀಸರಿಗೆ ಆರೋಪಿ ಶರಣಾಗಿದ್ದ. ಬಳಿಕ ಆತನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಮೂರು ದಿನಗಳ ಹಿಂದೆ ಆರೋಪಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ ಆರೋಪಿಗೆ ಕೊರೊನಾ ಇರುವುದು ದೃಢವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ
ಆತನ ಜೊತೆಗಿದ್ದ 20 ಖೈದಿಗಳನ್ನು ಜೈಲಿನಲ್ಲೇ ಕ್ವಾರಂಟೈನ್ ಮಾಡಲಾಗಿದೆ ಎನ್ನಲಾಗಿದೆ.
ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ
ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...








