ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

1989ರ ಭಾರತ -ಪಾಕ್ ಟೆಸ್ಟ್ ಸರಣಿಯಲ್ಲಿ ಚೆಂಡನ್ನು ವಿರೂಪಗೊಳಿಸಲಾಗಿತ್ತು –  ಕಿರಣ್ ಮೋರೆ

admin by admin
July 9, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

1989ರ ಭಾರತ -ಪಾಕ್ ಟೆಸ್ಟ್ ಸರಣಿಯಲ್ಲಿ ಚೆಂಡನ್ನು ವಿರೂಪಗೊಳಿಸಲಾಗಿತ್ತು –  ಕಿರಣ್ ಮೋರೆ

ಅದು 1989ರ ಭಾರತ ಮತ್ತು ನಡುವಿನ ಟೆಸ್ಟ್ ಸರಣಿ. ಆ ಪಂದ್ಯದಲ್ಲಿ ಭಾರತದ ಪರ ಸಚಿನ್ ತೆಂಡುಲ್ಕರ್ ಮತ್ತು ಪಾಕ್ ಪರ ವೇಗಿ ವಕಾರ್ ಯೂನಿಸ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪದರ್ಪಾಣೆ ಮಾಡಿದ್ದರು. ಆ ಸರಣಿಯಲ್ಲಿ ರಿವರ್ಸ್ ಸ್ವಿಂಗ್ ಮಾಡಲು ಉಭಯ ತಂಡಗಳ ಆಟಗಾರರು ಚೆಂಡನ್ನು ಮನಬಂದಂತೆ ಗೀಚುತ್ತಿದ್ದರು ಎಂಬ ವಿಚಾರವನ್ನು ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಕಿರಣ್ ಮೋರೆ ಬಹಿರಂಗಪಡಿಸಿದ್ದಾರೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಆಗ ಚೆಂಡನ್ನು ವಿರೂಪಗೊಳಿಸಿದ್ರೆ ಯಾವುದೇ ದಂಡ ವಿಧಿಸುತ್ತಿರಲಿಲ್ಲ. ಅಲ್ಲದೆ ಚೆಂಡನ್ನು ವಿರೂಪಗೊಳಿಸಿದ್ರೆ ದಂಡ ವಿಧಿಸುವ ಅಷ್ಟೊಂದು ದೊಡ್ಡ ಅಧಿಕಾರವೂ ಅಂಪೈರ್‍ಗಳಿಗೆ ಇರಲಿಲ್ಲ. ಅಲ್ಲದೆ ಚೆಂಡನ್ನು ಗೀಚಲು ಅವಕಾಶವನ್ನೂ ನೀಡಲಾಗಿತ್ತು. ಮಹತ್ವದ ಘಟ್ಟದಲ್ಲಿ ಚೆಂಡು ಹೆಚ್ಚು ಸ್ವಿಂಗ್ ಪಡೆಯಲು ಉಭಯ ತಂಡಗಳ ಆಟಗಾರರು ಚೆಂಡನ್ನು ಉಜ್ಜುತ್ತಿದ್ದರು. ಚೆಂಡು ಹೆಚ್ಚು ಸ್ವಿಂಗ್ ಪಡೆದಾಗ ಬ್ಯಾಟ್ಸ್ ಮೆನ್‍ಗಳಿಗೆ ಬ್ಯಾಟಿಂಗ್ ಮಾಡಲು ಕೂಡ ಹರ ಸಾಹಸ ಮಾಡಬೇಕಾಗಿತ್ತು ಎಂದು ಕಿರಣ್ ಮೋರೆ ಹೇಳಿದ್ದಾರೆ.
ಇನ್ನು ಚೆಂಡನ್ನು ವಿರೂಪಗೊಳಿಸಿದ್ದಾಗ ಉಭಯ ತಂಡಗಳ ಆಟಗಾರರು ದೂರು ಕೂಡ ನೀಡುತ್ತಿರಲಿಲ್ಲ. ಯಾಕಂದ್ರೆ ಎರಡೂ ತಂಡಗಳ ಆಟಗಾರರು ಇದೇ ರೀತಿ ಚೆಂಡನ್ನು ವಿರೂಪಗೊಳಿಸುತ್ತಿದ್ದರು. ಅಲ್ಲದೆ ಇದೇ ಸರಣಿಯಲ್ಲಿ ಭಾರತದ ವೇಗಿ ಮನೋಜ್ ಪ್ರಭಾಕರ್ ರಿವರ್ಸ್ ಸ್ವಿಂಗ್ ಮಾಡಲು ಚೆಂಡನ್ನು ಯಾವ ರೀತಿ ಗೀಚಬೇಕು ಎಂಬುದನ್ನು ಕೂಡ ಕಲಿತುಕೊಂಡಿದ್ದರು ಎಂದು ಕಿರಣ್ ಮೋರೆ ನೆನಪು ಮಾಡಿಕೊಂಡಿದ್ದಾರೆ.
ಇನ್ನು ಈ ಬಗ್ಗೆ 2018ರಲ್ಲಿ ಅಂಪೈರ್ ಜಾನ್ ಹೋಲ್ಡರ್ ಕೂಡ ಸಂದರ್ಶನವೊಂದರಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಆಗೀನ ಪಾಕ್ ನಾಯಕ ಇಮ್ರಾನ್ ಖಾನ್ ಮತ್ತು ಭಾರತದ ನಾಯಕ ಶ್ರೀಕಾಂತ್ ಅವರ ಬಳಿ ಈ ಕುರಿತು ಮಾತನಾಡಲು ಪ್ರಯತ್ನಿಸಿದ್ದೆ. ಆದ್ರೆ ಆಗ ಚೆಂಡನ್ನು ವಿರೂಪಗೊಳಿಸುವುದು ಯಾವುದೇ ರೀತಿಯ ಅಪರಾಧವಾಗಿರಲಿಲ್ಲ. ಹೀಗಾಗಿ ಆಗ ಶಿಕ್ಷೆ ನೀಡಲು ಆಗಿಲ್ಲ ಎಂದು ಜಾನ್ ಹೋಲ್ಡರ್ ಹೇಳಿದ್ದಾರೆ. ಜಾನ್ ಹೋಲ್ಡರ್ ಆ ಸರಣಿಯಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದರು.
ಈಗ ಚೆಂಡನ್ನು ವಿರೂಪಗೊಳಿಸಿದ್ರೆ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಪ್ರತಿ ಓವರ್ ಅಥವಾ ವಿಕೆಟ್ ಉರುಳಿದಾಗ ಚೆಂಡನ್ನು ಅಂಪೈರ್ ಕೈಗೆ ನೀಡಬೇಕು. ಆದ್ರೆ ಆಗ ಈ ರೀತಿಯ ನಿಯಮಗಳು ಇರಲಿಲ್ಲ. ಇದ್ರಿಂದ ಆಟಗಾರರು ನಿಂತಲ್ಲೇ ಕೈಯಿಂದ ಚೆಂಡನ್ನು ವಿರೂಪಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಅಂಪೈರ್‍ಗಳು ಮೈದಾನದಲ್ಲಿ ಏನು ಹೇಳಬೇಕಾದ್ರೂ ಇಬ್ಬರು ನಾಯಕರು ಮತ್ತು ಮ್ಯಾನೇಜರ್ ಅವರನ್ನು ಒಟ್ಟಿಗೆ ಸೇರಿಸಿ ಹೇಳಬೇಕಾಗಿತ್ತು. ಅಷ್ಟೇ ಅಲ್ಲ, ಚೆಂಡನ್ನು ವಿರೂಪಗೊಳಿಸುವುದು ತಪ್ಪು ಅದು ಅಪರಾಧ ಅಂತ ನಾವು ಹೇಳಿದ್ದೇವೆ ಎಂದು ಜಾನ್ ಹೋಲ್ಡರ್ ಎರಡು ವರ್ಷಗಳ ಹಿಂದಿನ ಸಂದರ್ಶನದಲ್ಲಿ ಹೇಳಿದ್ದರು.

Tags: ball tamperingIMRAN KHANIndia-Pakistan series 1989kiran morePakistanSachin Tendulkarwaquar yunis
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram