ಆರ್ ಸಿಬಿಯನ್ಸ್ ಬಿಗ್ ಶಾಕ್ : ಆರ್ ಸಿಬಿ ನಾಯಕತ್ವಕ್ಕೆ ಕೊಹ್ಲಿ ಗುಡ್ ಬೈ..?
ಬೆಂಗಳೂರು : ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟಿ-20 ವಿಶ್ವಕಪ್ ಬಳಿಕ ಭಾರತದ ಟಿ-20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.
ಇದು ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗಿದೆ. ಹಾಗೆ ಮುಂದೆ ಟೀಂ ಇಂಡಿಯಾದ ನಾಯಕರು ಯಾರಾಗ್ತಾರೆ ಅನ್ನೋ ಪ್ರಶ್ನೆ ಕೂಡ ಉದ್ಭವಾಗಿದೆ.
ಈ ಮಧ್ಯೆ ಕಿಂಗ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವಕ್ಕೂ ಗುಡ್ ಬೈ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಾರಿಯ ಐಪಿಎಲ್ ಬಳಿಕ ವಿರಾಟ್ ಆರ್ ಸಿಬಿ ನಾಯಕತ್ವಕ್ಕೂ ವಿದಾಯ ಹೇಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಕೊಹ್ಲಿ ಬಾಲ್ಯದ ಕೋಚ್ ರಾಜ್ಕುಮಾರ್ ಶರ್ಮಾ ಮಾತನಾಡಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ಏಕದಿನ ಮತ್ತು ಟೆಸ್ಟ್ ತಂಡಗಳ ನಾಯಕತ್ವದ ಕುರಿತು ಹೆಚ್ಚಿನ ಗಮನ ಹರಿಸುವ ಸಲುವಾಗಿ ವಿರಾಟ್ ಕೊಹ್ಲಿ ಆರ್ ಸಿಬಿ ನಾಯಕತ್ವಕ್ಕೆ ವಿದಾಯ ಹೇಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಆರ್ ಸಿಬಿ ನಾಯಕತ್ವಕ್ಕೆ ವಿದಾಯ ಹೇಳುವ ಬಗ್ಗೆ ವಿರಾಟ್ ಕೊಹ್ಲಿ ಸದ್ಯ ಯಾವುದೇ ಮಾಹಿತಿ ನೀಡಿಲ್ಲ. ಎಲ್ಲೂ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.
ಆದ್ರೆ ಟಿ-20 ಕ್ಯಾಪ್ಟನ್ಸಿಗೆ ಗುಡ್ ಬೈ ಹೇಳಲು ವಿರಾಟ್ ನೀಡಿರುವ ಕಾರಣ ನೋಡಿದ್ರೆ, ಬಹುಶಃ ವಿರಾಟ್ ಈ ಬಾರಿಯ ಐಪಿಎಲ್ ಬಳಿಕ ಆರ್ ಸಿಬಿ ನಾಯಕತ್ವಕ್ಕೆ ಗುಡ್ ಬೈ ಹೇಳೋದು ಪಕ್ಕಾ ಎನ್ನಲಾಗುತ್ತಿದೆ.
ಯಾಕೆಂದರೇ ವಿರಾಟ್ ಕೊಹ್ಲಿ ಹೇಳಿರುವಂತೆ ಬ್ಯಾಟಿಂಗ್ ಮತ್ತು ಏಕದಿನ, ಟೆಸ್ಟ್ ಕ್ರಿಕೆಟ್ ನತ್ತ ಹೆಚ್ಚು ಗಮನ ಹರಿಸಲು ಟಿ-20 ನಾಯಕತ್ವ ತ್ಯೆಜಿಸುತ್ತಿರುವುದಾಗಿ ತಿಳಿಸಿದ್ದಾರೆ.
ಇದನ್ನ ಗಮನಿಸಿದ್ರೆ ವಿರಾಟ್ ಆರ್ ಸಿಬಿ ನಾಯಕತ್ವಕ್ಕೂ ಗುಡ್ ಬೈ ಹೇಳುವ ಸಾಧ್ಯತೆಗಳನ್ನು ಅಲ್ಲಗೆಳೆಯುವಂತಿಲ್ಲ.