ನಾನು ಕೊಚ್ಚೆ ನೀರನ್ನೇ ಕುಡಿದಿದ್ದೇನೆ : ಶ್ರೀನಿವಾಸಗೌಡ
ಕೋಲಾರ : ನಾನು ಕೊಚ್ಚೆ ನೀರನ್ನೇ ಕುಡಿದ್ದೇನೆ ಎಂದು ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ ಹೇಳಿಕೆ ನೀಡಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.
ಯಾಕೆಂದರೇ ಇತ್ತೀಚೆಗೆ ಕೋಲಾರಕ್ಕೆ ಭೇಟಿ ನೀಡಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜಿಲ್ಲೆಗೆ ಕೊಚ್ಚೆ ನೀರನ್ನ ಹರಿಸಲಾಗಿದೆ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಕೆ.ಶ್ರೀನಿವಾಸಗೌಡ ಕುಮಾರಸ್ವಾಮಿ ಅವರಿಗೇ ಟಾಂಗ್ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ಕೋಲಾರ ತಾಲೂಕಿನ ಎಸ್.ಅಗ್ರಹಾರ ಕೆರೆ 2 ನೇ ಬಾರಿಗೆ ತುಂಬಿದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೊಚ್ಚೆ ನೀರನ್ನ ನಾನು ಕುಡಿದಿದ್ದೇನೆ, ನಾನು ಸತ್ತಿದ್ದರೆ ಅದು ಕೊಚ್ಚೆ ನೀರು. ನಾವು ರೈತರು ನಮಗೆ ನೀರು ಮುಖ್ಯ ಯಾವ ನೀರು ಅನ್ನೋದಲ್ಲ ಎಂದರು.