ಕೋಲಾರ | ಗ್ರಾ.ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಹೈಡ್ರಾಮಾ..!
ಕೋಲಾರ : ನರಸಾಪುರ ಗ್ರಾಮ ಪಂಚಾಯ್ತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಚುನಾವಣಾಧಿಕಾರಿ ಮಾಡಿದ್ದ ಎಡವಟ್ಟಿನಿಂದಾಗಿ ಕೆಲ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಕ್ಯಾಸಂಬಳಿ ಗ್ರಾಮ ಪಂಚಾಯತಿಯಲ್ಲಿ 20 ಸದಸ್ಯ ಬಲ ಹೊಂದಿದೆ.
ಆದ್ರೆ ಚುನಾವಣಾಧಿಕಾರಿ ಮಾಡಿದ ಸಣ್ಣ ಯಡವಟ್ಟಿನಿಂದ ಗ್ರಾಮ ಪಂಚಾಯತಿಯಲ್ಲಿ ದೊಡ್ಡ ಹೈ ಡ್ರಾಮಾವೇ ನಡೆದಿದೆ.
ಇದ್ರಿಂದಾಗಿ ಇದೀಗ ಗ್ರಾಮ ಪಂಚಾಯತಿ ಅದ್ಯಕ್ಷ ಹಾಗು ಉಪಾದ್ಯಕ್ಷರ ಚುನಾವಣೆ ಮುಂದೂಡಲಾಗಿದೆ.
ಬಂಗಾರಪೇಟೆ ತಾಲೂಕಿನ ರೇಷ್ಮೆ ಅಧಿಕಾರಿ, ಚುನಾವಣಾಧಿಕಾರಿಯಾಗಿದ್ದ ದಿನೇಶ್ ಎಂಬುವವರು 20 ಬ್ಯಾಲೆಟ್ ಬದಲು 21 ಬ್ಯಾಲಟ್ಗಳನ್ನು ನೀಡಿ ಯಡವಟ್ಟು ಮಾಡಿದ್ದಾರೆ.
ಇನ್ನೂ ತಮ್ಮ ಯಡವಟ್ಟು ತಿಳಿಯುತ್ತಿದ್ದಂತೆ ಎದೆ ನೊವು ಕಾಣಿಸಿಕೊಂಡು ಅಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತ ಇಷ್ಟೆಲ್ಲಾ ನಡೆಯುತ್ತಿದ್ದಂತೆ ಗ್ರಾಮ ಪಂಚಾಯತಿ ಎದುರು ನೂರಾರು ಜನರು ಜಮಾಯಿಸಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಕೆಜಿಎಫ್ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel