ಕೋಲಾರ, ಮೇ21 : ವಾಲಿಬಾಲ್ ಆಟದ ವಿಚಾರಕ್ಕೆ ಗಲಾಟೆ ಆಗಿ ಮೂವರಿಗೆ ಚಾಕು ಇರಿದಿರುವ ಘಟನೆ ಕೋಲಾರ ತಾಲೂಕಿನ ಕೆ.ಬಿ. ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ವಾಲಿಬಾಲ್ ಕೋರ್ಟ್ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದೆ. ಈ ವೇಳೆ ಒಂದು ಗುಂಪು ಖಾರದ ಪುಡಿ ಎರಚಿ ಮೂವರಿಗೆ ಚಾಕುವಿನಿಂದ ಇರಿದಿದೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ 38 ವರ್ಷದ ಮಂಜುನಾಥ್, 28 ವರ್ಷದ ಅಮರೇಶ್, 24 ವರ್ಷದ ಮಣಿ ಎಂಬುವವರು ಚಾಕು ಇರಿತಕ್ಕೊಳಗಾದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ಸ್ಥಳಾಂತರಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ ಮೂವರ ಬೆನ್ನು, ಹೊಟ್ಟೆ ಹಾಗೂ ಕಿಡ್ನಿ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ವಿನೋದ್, ಮಂಜುನಾಥ್, ಮುನಿಯಪ್ಪ, ರಾಜಣ್ಣ, ಮುತ್ತು ಹಲ್ಲೆ ಮಾಡಿದ ಆರೋಪಿಗಳಾಗಿದ್ದಾರೆ. ಇನ್ನು ಈ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ
ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...








