ತಮಿಳು ಸಿನಿಮಾರಂಗದ ಖ್ಯಾತ ನಿರ್ದೇಶಕ ಕೆ.ವಿ ಆನಂದ್ ನಿಧನ
ಚೆನ್ನೈ : ಕಾಲಿವುಡ್ ನ ಖ್ಯಾತ ನಿರ್ದೇಶಕ ಕೆ.ವಿ ಆನಂದ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಚೆನ್ನೈನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 54 ವರ್ಷದ ಖ್ಯಾತ ನಿರ್ದೇಶಕ ಕೆ.ವಿ ಆನಂದ್ ಅವರ ಹಠಾತ್ ನಿಧನದ ಸುದ್ದಿಯಿಂದ ತಮಿಳು ಚಿತ್ರರಂಗ ಆಘಾತಕ್ಕೆ ಒಳಗಾಗಿದೆ.
ಆನಂದ್ 2005ರಲ್ಲಿ ತಮಿಳಿನ ಕನ ಕಂದೇನ್ ಸಿನಿಮಾ ಮೂಲಕ ನಿರ್ದೇಶಕರಾಗಿ ಗುರುತಿಸಿಕೊಂಡವರು.. ಬಳಿಕ ಆನಂದ್ ತಮಿಳಿನಲ್ಲಿ ಅಯಾನ್, ಕೋ, ಮಾಟ್ರಾನ್, ಅನೆಗನ್ ಕಾಪ್ಪಾನ್ ಅಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. 2019ರಲ್ಲಿ ಬಿಡುಗಡೆಯಾದ ಸೂರ್ಯ ನಟನೆಯ ಕಾಪ್ಪಾನ್ ಸಿನಿಮಾ ಕೆ.ವಿ ಆನಂದ್ ದೇಶದ ಗಮನ ಸೆಳೆದಿದ್ದರು. ಕೆ.ವಿ ಆನಂದ್ ಚೊಚ್ಚಲ ಸಿನಿಮಾದ ಛಾಯಾಗ್ರಾಹಣ ಅತ್ಯುತ್ತಮ ಛಾಯಾಗ್ರಾಹಕ ರಾಷ್ಟ್ರಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಆನಂದ್ ನಿಧನಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.