ನಿಲ್ಲದ ಕೊರೊನಾ ಆರ್ಭಟ, ಇಂದು 20ಬಲಿ ಪಡೆದ ಹೆಮ್ಮಾರಿ
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆರ್ಭಟ ಇಂದೂ ಕೂಡಾ ಮುಂದುವರೆದಿದೆ. ಇಂದು 947 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ 6 ಮಂದಿಯನ್ನು ಬಲಿ ಪಡೆದಿದ್ದು, ರಾಜ್ಯದಲ್ಲಿ ಒಟ್ಟು20 ಮಂದಿ ಮಹಾಮಾರಿಗೆ ಉಸಿರು ಚೆಲ್ಲಿದ್ದಾರೆ.
ಬೆಂಗಳೂರು ನಗರದಲ್ಲಿ ಎರಡು ದಿನಗಳ ಸಂಖ್ಯೆಗೆ ಹೋಲಿಸಿದರೆ ಇಂದು ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದ್ದರೂ 503 ಜನರಿಗೆ ಪಾಸಿಟಿವ್ ಬಂದಿದೆ.
ಬಳ್ಳಾರಿ ಜಿಲ್ಲೆಯಲ್ಲಿ 106 ಜನರಿಗೆ ಕೊರೊನಾ ಬಂದಿದೆ ಎಂದು ಜಿಲ್ಲಾಡಳಿತ ವೇ ಅಧಿಕೃತ ಮಾಹಿತಿ ಕೊಟ್ಟಿದ್ದರೂ ಆರೋಗ್ಯ ಇಲಾಖೆ ಮಾತ್ರ ಆ ಲೆಕ್ಕವನ್ನು 61ಕ್ಕೆ ಇಳಿಕೆ ಮಾಡಿರುವುದು ಯಾವ ಕಾರಣಕ್ಕಾಗಿ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಬೇಕಿದೆ.
ಇಂದಿನ 947 ಪ್ರಕರಣ ಸೇರಿದಂತೆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 15242ಕ್ಕೆ ಏರಿಕೆಯಾಗಿ ಮೃತರ ನಂಬರ್ 246ಕ್ಕೆ ತಲುಪಿದೆ.
ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ಎದುರಾಗಿದೆ.