ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೋವಿಡ್-19 ಶ್ವಾಸಕೋಶದ ಮಾತ್ರವಲ್ಲ ಇತರ ಅಂಗಗಳ ಮೇಲೂ ಪರಿಣಾಮ ಬೀರಬಹುದು – ಏಮ್ಸ್ ತಜ್ಞರು

admin by admin
August 28, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಕೋವಿಡ್-19 ಶ್ವಾಸಕೋಶದ ಮಾತ್ರವಲ್ಲ ಇತರ ಅಂಗಗಳ ಮೇಲೂ ಪರಿಣಾಮ ಬೀರಬಹುದು – ಏಮ್ಸ್ ತಜ್ಞರು

ಹೊಸದಿಲ್ಲಿ, ಅಗಸ್ಟ್28: ಕೋವಿಡ್-19 ಶ್ವಾಸಕೋಶದ ಸೇರಿದಂತೆ ‌ಇತರ ಅಂಗಗಳ ಮೇಲೂ ಪರಿಣಾಮ ಬೀರಬಹುದು ಎಂದು ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ತಜ್ಞರು ಹೇಳಿದ್ದಾರೆ.
ಕೇವಲ ಉಸಿರಾಟದ ಲಕ್ಷಣಗಳ ಆಧಾರದ ಮೇಲೆ ಪ್ರಕರಣಗಳನ್ನು ಲಘ, ಮಧ್ಯಮ ಮತ್ತು ತೀವ್ರ ವರ್ಗಗಳಾಗಿ ವರ್ಗೀಕರಿಸಲಾಗಿದೆ. ಆದರೆ ಇತರ ಅಂಗಾಂಗಗಳ ಮೇಲಿನ ಪರಿಣಾಮವನ್ನು ಮರುಪರಿಶೀಲಿಸಬೇಕಿದೆ ಎಂದು ಅವರು ಒತ್ತಿ ಹೇಳಿದರು.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026


ಸಂಸ್ಥೆಯ ನಿರ್ದೇಶಕರಾದ ಡಾ.ರಣ್ದೀಪ್ ಗುಲೇರಿಯಾ, ನರವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಎಂ.ವಿ.ಪದ್ಮ ಶ್ರೀವಾಸ್ತವ, ಹೃದಯ ಸಂಬಂಧಿ ಪ್ರೊಫೆಸರ್ ಡಾ. ಅಂಬುಜ್ ರಾಯ್, ಡಿಪಾರ್ಟ್‌ಮೆಂಟ್‌ ಆಫ್ ಮೆಡಿಸಿನ್‌ನ ಸಹಾಯಕ ಉಪನ್ಯಾಸಕ ಡಾ.ನೀರಜ್ ನಿಶ್ಚಲ್ ಎನ್ಐಟಿಐ ಆಯೋಗದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ನ್ಯಾಷನಲ್ ಕ್ಲಿನಿಕಲ್ ಗ್ರ್ಯಾಂಡ್ ರೌಂಡ್ಸ್ ಸಮಯದಲ್ಲಿ ಕೋವಿಡ್-19ನಿಂದ ಹೆಚ್ಚುವರಿ ಶ್ವಾಸಕೋಶದ ತೊಂದರೆಗಳ ಬಗ್ಗೆ ಚರ್ಚೆ‌ ನಡೆಸಿದ್ದಾರೆ. ‌
ಈ ಮೊದಲು ಕೋವಿಡ್-19 ವೈರಲ್ ನ್ಯುಮೋನಿಯಾ ಎಂದು ಪರಿಗಣಿಸಲಾಗಿತ್ತು. ಆದರೆ ಕೋವಿಡ್-19 ಬಗ್ಗೆ ನಾವು ಹೆಚ್ಚು ಹೆಚ್ಚು ತಿಳಿಯುತ್ತಾ ಹೋದಂತೆ, ಇದು ಶ್ವಾಸಕೋಶವನ್ನು ಮೀರಿ ಇತರ ಅಂಗಗಳಿಗೂ ಅಪಾಯಗಳನ್ನು ತಂದೊಡ್ಡುವ ಸಾಮರ್ಥ್ಯ ಹೊಂದಿದೆ ಎಂದು ನಾವು ಅರಿತುಕೊಂಡಿದ್ದೇವೆ. ಇದು ಮೂಲತಃ ವೈರಸ್ ಎಸಿಇ ರಿಸೆಪ್ಟರ್ಸ್ ಮೂಲಕ ಮೂಲಕ ಕೋಶಕ್ಕೆ ಪ್ರವೇಶಿಸುತ್ತದೆ, ಆದರೆ ಮೇಲ್ಭಾಗದ ವಾಯುಮಾರ್ಗಗಳು ಮತ್ತು ಶ್ವಾಸಕೋಶಗಳಲ್ಲಿ ಹೇರಳವಾಗಿ ಕಂಡುಬರುತ್ತದೆಯಾದರೂ, ಅನೇಕ ಅಂಗಾಂಗಗಳಿಗ ಇದು ಸೇರ್ಪಡೆಯಾಗುತ್ತದೆ. ಆದ್ದರಿಂದ ಇತರ ಅಂಗಾಂಗಗಳ ಮೇಲೂ ಮಾರಣಾಂತಿಕ ಪರಿಣಾಮ ಬೀರುತ್ತವೆ ಎಂದು ಅವರು ಹೇಳಿದರು.


ಕಾರ್ಯಕ್ರಮದ ತಜ್ಞರು ರೋಗಿಗಳನ್ನು ಲಕ್ಷಣರಹಿತ ಅಥವಾ ಲಘ ಕೋವಿಡ್ ಎಂದು ಗುರುತಿಸಿದ ಹಲವಾರು ಪ್ರಕರಣಗಳಲ್ಲಿ ಸ್ಟ್ರೋಕ್ ಮತ್ತು ಹಾರ್ಟ್ ಬ್ಲಾಕ್‌ಗಳಂತಹ ಗಂಭೀರ ಮಾರಣಾಂತಿಕ ಅಪಾಯ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.
ಡಾ. ಅಂಬುಜ್ ರಾಯ್ ಕಡಿಮೆ ನಾಡಿ ಬಡಿತದೊಂದಿಗೆ ಬಂದ ರೋಗಿಯ ಪ್ರಕರಣವನ್ನು ಉದಾಹರಣೆ ನೀಡಿದ ಡಾ. ಅಂಬುಜ್ ರಾಯ್, ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮತ್ತು ಹೃದಯ ಬಡಿತವನ್ನು ಸುಧಾರಿಸಲು ಕೆಲವು ಔಷಧಿಗಳೊಂದಿಗೆ ಅವರಿಗೆ ಆರಂಭಿಕ ಬೆಂಬಲ ಅಗತ್ಯವಾಗಿತ್ತು. ಸಾಮಾನ್ಯವಾಗಿ ಪೇಸ್‌ಮೇಕರ್ ಅನ್ನು ಅಂತಹ ರೋಗಿಗಳಲ್ಲಿ ಅವರ ಹೃದಯ ಬಡಿತವನ್ನು ಸುಧಾರಿಸಲು ಇರಿಸಲಾಗುತ್ತದೆ ಆದರೆ ಅನುಭವಗಳ ಆಧಾರದ ಮೇಲೆ, ಇದು ಕೆಲವು ಕೋವಿಡ್-19 ಕಾರಣದಿಂದಾಗಿರಬಹುದು ಎಂದು ನಾವು ಅರಿತುಕೊಂಡೆವು. ಆದ್ದರಿಂದ ಪೇಸ್‌ಮೇಕರ್ ಅನ್ನು ಹಾಕಲಾಗಿಲ್ಲ ಮತ್ತು ಸಹಾಯಕ ಚಿಕಿತ್ಸೆಯೊಂದಿಗೆ ಆಕೆಯ ಹೃದಯ ಬಡಿತ ಕ್ರಮೇಣ ಸುಧಾರಿಸಿತು ಎಂದು ಹೇಳಿದರು.

ಕೆಲವೊಮ್ಮೆ, ಹೃದಯ ಬಡಿತಕ್ಕೆ ಕಾರಣವಾಗುವ ಹೃದಯದ ವಿದ್ಯುತ್ ನಾಡಿ ವ್ಯವಸ್ಥೆಯು ಕೋವಿಡ್-19 ನಲ್ಲಿ ಪರಿಣಾಮ ಬೀರಬಹುದು ಮತ್ತು ಇದು ಸ್ವಯಂ-ಸೀಮಿತವಾಗಿದೆ ಮತ್ತು ಸಮಯದೊಂದಿಗೆ ಸುಧಾರಿಸುತ್ತದೆ. ಆದ್ದರಿಂದ ಸಾಮಾನ್ಯವಾಗಿ ಪೇಸ್‌ಮೇಕರ್ ಅಗತ್ಯವಿರುವ ಈ ರೋಗಿಗಳಿಗೆ ಇದು ಎಂದಿಗೂ ಅಗತ್ಯವಿರುವುದಿಲ್ಲ ಎಂದು ಅವರು ಹೇಳಿದರು.
ಆದಾಗ್ಯೂ, ಇದು ಹೊಸ ಸೋಂಕು ಆಗಿದ್ದು, ಈ ಬಗ್ಗೆ ಸೀಮಿತ ಮಾಹಿತಿ ಮತ್ತು ಅನುಭವವು ಲಭ್ಯವಿರುವುದರಿಂದ ಈ ಬಗ್ಗೆ ಖಚಿತವಾಗಿ ಹೇಳಲು ಹೆಚ್ಚಿನ ಪುರಾವೆಗಳು ಬೇಕಾಗುತ್ತವೆ ಎಂದು ಡಾ.‌ ರಾಯ್ ಹೇಳಿದರು.

Tags: AIMSAll India Institute of Medical SciencescoronavirusCOVID-19HealthKannada latest newskarnatakaKovid-19 can affect not only the lungs but also other organs - Aims expertsViralcoronavirusಡಾ. ಅಂಬುಜ್ ರಾಯ್ಡಾ.ಎಂ.ವಿ.ಪದ್ಮ ಶ್ರೀವಾಸ್ತವಡಾ.ನೀರಜ್ ನಿಶ್ಚಲ್ಡಾ.ರಣ್ದೀಪ್ ಗುಲೇರಿಯಾ
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram