ಕಾಂಗ್ರೆಸ್ ಸೇರುವವರಿಗೆ ಡಿಕೆಶಿ ಮುಕ್ತ ಆಹ್ವಾನ D K Shivakumar saaksha tv
ಬೆಂಗಳೂರು : ಕಾಂಗ್ರೆಸ್ ಪಕ್ಷ ಸೇರುವವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಕ್ತ ಆಹ್ವಾನ ನೀಡಿದ್ದಾರೆ.
ಇಂದು ಡಿಕೆಶಿವಕುಮಾರ್ ಅವರ ಸಮ್ಮುಖದಲ್ಲಿ ಜಗಳೂರು ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ದೇವೇಂದ್ರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಕಾರ್ಯಕ್ರಮದ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಯಾರೆಲ್ಲಾ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿದ್ದಾರೋ ಅವರಿಗೆ ಮತ್ತೆ ಪಕ್ಷಕ್ಕೆ ಹಿಂದಿರುಗಲು, ಯಾರು ಕಾಂಗ್ರೆಸ್ ಪಕ್ಷವನ್ನು ಸೇರಲು ಬಯಸುತ್ತಾರೋ ಅವರಿಗೆಲ್ಲ ನಾನು ಪಕ್ಷ ಸೇರ್ಪಡೆಗೆ ಅವಕಾಶ ನೀಡಲು ಬಯಸುತ್ತೇನೆ. ಯಾವುದೇ ಷರತ್ತುಗಳಿಲ್ಲದೆ, ಪಕ್ಷದ ಸಿದ್ಧಾಂತವನ್ನು ಒಪ್ಪಿ ಪಕ್ಷಕ್ಕೆ ಬರುವವರಿಗೆ ಮುಕ್ತ ಆಹ್ವಾನವಿರಲಿದೆ ಎಂದು ತಿಳಿಸಿದ್ದಾರೆ.
ಇನ್ನು ಸದಸ್ಯತ್ವ ಅಭಿಯಾನದ ಮೂಲಕ ಮುಕ್ತ ಸದಸ್ಯತ್ವ ಪಡೆಯಲು ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಅವರು ಅವಕಾಶ ನೀಡಿದ್ದಾರೆ.
ನವೆಂಬರ್ 14, ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ.
\ಹಳೆಯ ಸದಸ್ಯರು ತಮ್ಮ ಸದಸ್ಯತ್ವ ನವೀಕರಿಸಿಕೊಳ್ಳಲೂ ಅವಕಾಶವಿರಲಿದೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಕಳೆದ ಚುನಾವಣೆಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಹೆಚ್.ಪಿ ರಾಜೇಶ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.