ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಸಬಿಐ ತನಿಖೆಗೆ ಆಗ್ರಹಿಸಿದ್ದು, ಈ ವಿಚಾರವಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರ ಹೇಳಿಕೆಯ ಬಗ್ಗೆ ಇನ್ನೂ ನನಗೆ ಗೊತ್ತಿಲ್ಲ, ನಮ್ಮಪಕ್ಷದ ಸ್ಟಾಂಡ್ ಏನು ಅನ್ನೋದನ್ನ ಹೇಳಿದ್ದೇವೆ. ಎಲ್ಲರೂ ಕುಳಿತು ಮಾತನಾಡುತ್ತೇವೆ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ನವೀನ್ ಕುಮಾರ್ ಹಾಕಿದ್ದ ಫೇಸ್ ಬುಕ್ ಪೋಸ್ಟ್ ಸದ್ಯ ದೊಡ್ಡ ಹಿಂಸಾಚಾರಕ್ಕೆ ಕಾರಣವಾಗಿತ್ತು. ಗಲಭೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ವೇಳೆ ಪೊಲೀಸರ ಗುಂಡಿಗೆ ಮೂವರು ಬಲಿಯಾಗಿದ್ದರು.
ಅಮಿತ್ ಶಾ ಮಾತು ಕೇಳಿ ತಪ್ಪು ಮಾಡಿದೆ ಎಂದು ಮರಗುತ್ತಿರುವ ಕೆ.ಎಸ್. ಈಶ್ವರಪ್ಪ?
ಬಾಗಲಕೋಟೆ: ಅಮಿತ್ ಶಾ (Amit shah) ಮಾತು ಕೇಳಿ ತಪ್ಪು ಮಾಡಿ ಬಿಟ್ನಾ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ಪ್ರಶ್ನಿಸಿ ಬೇಸರಿಸಿಕೊಂಡಿದ್ದಾರೆ....