ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ.
ಎಐಸಿಸಿಯು ಇಂದು ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಅಲ್ಲದೇ, ರಾಜ್ಯದ ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗಿದೆ. ಕೆಪಿಸಿಸಿ ಖಜಾಂಚಿಯಾಗಿ ವಿನಯ್ ಕಾರ್ತಿಕ್ ಅವರನ್ನೇ ಮುಂದುವರೆಸಲಾಗಿದೆ. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ್ ಬಾಬು ನೇಮಕವಾಗಿದ್ದಾರೆ. ವಿನಯ್ ಮತ್ತಿಕಟ್ಟಿ ಅವರನ್ನು ಸಾಮಾಜಿಕ ಜಾಲತಾಣ ಸಹ ಮುಖ್ಯಸ್ಥರಾಗಿ ನೇಮಿಸಲಾಗಿದೆ.
ಕೆಪಿಸಿಸಿ ಪ್ರಚಾರ ಸಮಿತಿ ಸಹ- ಮುಖ್ಯಸ್ಥರಾಗಿ ಪಿ.ಟಿ ಪರಮೇಶ್ವರ್ ನಾಯಕ್ ನೇಮಕಗೊಂಡಿದ್ದಾರೆ. 7 ಜಿಲ್ಲೆಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿ ನಗರ- ಪ್ರಶಾಂತ್ ಅಲ್ಲಂ ವೀರಭದ್ರಪ್ಪ, ಬೆಂಗಳೂರು ಪೂರ್ವ – ಕೆ. ನಂದಕುಮಾರ್, ಹಾವೇರಿ – ಸಂಜೀವ್ ಕುಮಾರ್ ನೀರಲಂಗಿ, ಕೊಪ್ಪಳ – ಅಮರೇಗೌಡ ಬಯ್ಯಾಪುರ, ಉಡುಪಿ – ಕಿಶನ್ ಹೆಗ್ಡೆ, ರಾಯಚೂರು – ಬಸವರಾಜ ಇಟಗಿ, ಶಿವಮೊಗ್ಗ – ಪ್ರಸನ್ನ ಕುಮಾರ್ ಆಯ್ಕೆಯಾಗಿದ್ದಾರೆ.