ವಿಜಯಪುರ: ಪಶ್ಚಿಮ ಘಟ್ಟದಲ್ಲಿ ಬಾರೀ ಮಳೆಯಾಗುತ್ತಿರುವ ಪರಿಣಾಮ ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದೆ. ಧಾರಾಕಾರ ಮಳೆಗೆ ಇಂದು ಒಂದೇ ದಿನ ಜಲಾಶಯಕ್ಕೆ 13 ಟಿಎಂಸಿ ಅಡಿ ನೀರು ಹರಿದು ಬಂದಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಹೀಗೆ ಮುಂದುವರೆದರೆ ಲಕ್ಷ ಕ್ಯುಸೆಕ್ ಗೂ ಹೆಚ್ಚು ಒಳಹರಿವಾಗುವ ಸಾಧ್ಯತೆಯಿದೆ. ಜಲಾಶಯದ ಒಳಹರಿವು 1.70 ಲಕ್ಷ ಕ್ಯುಸೆಕ್ ಗೆ ಏರಿಕೆಯಾದ ಹಿನ್ನೆಲೆ , ನದಿಗೆ 2.20 ಲಕ್ಷ ಕ್ಯುಸೆಕ್ ನೀರು ಬಿಡಲಾಗಿದೆ. ಜಲಾಶಯದ 26 ಗೇಟ್ಗಳ ಮೂಲಕವೂ ನೀರು ಹರಿಸಲಾಗಿದೆ. ಇತ್ತ ಹರಿವು ಹೆಚ್ಚಳವಾದ ಪರಿಣಾಮ ಡ್ಯಾಂನ ಸಮೀಪದಲ್ಲೇ ಇದ್ದ ಅರಳದಿನ್ನಿ ಗ್ರಾಮದ ಕೆಲ ಜಮೀನುಗಳು ಜಲಾವೃತಗೊಂಡಿದ್ದು, ಬೇಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಈಗಾಗಲೇ ಡ್ಯಾಂನಲ್ಲಿ 95 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಇನ್ನೂ 28 ಟಿಎಂಸಿ ಅಡಿ ನೀರಿನ ಸಂಗ್ರವದಾದಲ್ಲಿ ಡ್ಯಾಂ ಸಂಪೂರ್ಣ ಭರ್ತಿ ಆಗಲಿದೆ. ಹೀಗಾಗಿ ಇದೀಗ ನದಿ ಪಾತ್ರದ ಜನರಲ್ಲಿ ನೆರೆ ಭೀತಿ ಎದುರಾಗಿ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.
ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...








