KSRTC – BMTC : ಇಂದು ಸಾರಿಗೆ ನೌಕರರಿಂದ ಪ್ರತಿಭಟನೆ – ಬಸ್ ಸೇವೆಯಲ್ಲಿ ವ್ಯತ್ಯಯ ಇಲ್ಲ….
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನ ಈಡೇರಿಸಲು ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಇಂದು ರಾಜ್ಯದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೇ ಇದರಿಂದ ಸಾರಿಗೆ ಸೇವೆಗಳಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ.
ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು 6 ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಿಯಮಬದ್ಧವಾಗಿ 2020 ಮಾರ್ಚ್ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1,20,000 ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ಬಸ್ ಡಿಪೋ ಮತ್ತು ವಿಭಾಗೀಯ ಕಛೇರಿಗಳ ಮುಂಬಾಗ ಮತ್ತು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಬೆಂಬಲ ಸೂಚಿಸಿದ್ದಾರೆ. ಆದರೇ ಇದರಿಂದ ಬಸ್ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಸ್ಪಷ್ಟಪಡಿಸಿವೆ.
KSRTC – BMTC : Protest by transport employees today – No variation in bus service….