ಕುಕ್ಕೆ ಸುಬ್ರಮಣ್ಯದಲ್ಲಿ ಹಿಂದಿನ ಸಂಪ್ರದಾಯದಂತೆ ಮಹಾಶಿವರಾತ್ರಿ ಆಚರಣೆ : ಹೈಕೋರ್ಟ್..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ತೀರ್ಥಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹಿಂದಿನಿಂದ ಪಾಲಿಸಿಕೊಂಡು ಬಂದಿರುವ ಸಂಪ್ರದಾಯದಂತೆಯೇ ಮಹಾಶಿವರಾತ್ರಿ ಆಚರಣೆ ಮಾಡುವಂತೆ ಹೈಕೋರ್ಟ್ ದೇವಾಲಯದ ಆಡಳಿತ ಮಂಡಳಿಗೆ ನಿರ್ದೇಶನ ನೀಡಿದೆ.
ಶೈವ ಪದ್ಧತಿ ಅನುಸಾರ ಹಬ್ಬ ಆಚರಣೆ ಮಾಡಲು ಅವಕಾಶ ಕಲ್ಪಿಸಿ, ಹಿಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ದೇವಾಲಯದ ಭಕ್ತರಾದ ಬಿ.ಆರ್. ಮುರಳೀಧರ್, ವಿಜಯಸಿಂಹ ಮತ್ತು ಇತರರು ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಮಮತಾ ಬ್ಯಾನರ್ಜಿ ಮೇಲೆ ದಾಳಿ : ಆಸ್ಪತ್ರೆಗೆ ದಾಖಲು
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ, ಹೊಸ ಪದ್ಧತಿ ಅನುಸರಿಸುವುದು ಬೇಡ. ದೇವಾಲಯದಲ್ಲಿ ಮೊದಲಿನಿಂದಲೂ ಯಾವ ಪದ್ಧತಿ ಅನುಸರಿಸಿಕೊಂಡು ಬರಲಾಗುತ್ತಿದೆಯೋ ಅದೇ ಪದ್ಧತಿಯ ಅನುಸಾರ ಶಿವರಾತ್ರಿ ಆಚರಣೆ ನಡೆಯಲಿ ಎಂದು ಮಧ್ಯಂತರ ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ಅರ್ಜಿ ಸಂಬಂಧ ಸರ್ಕಾರ ಹಾಗೂ ಹಿಂದು ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಅಲ್ಲದೇ ದೇವಸ್ಥಾನದ ಹಿಂದಿನ ಸಂಪ್ರದಾಯವನ್ನು ಬದಲಿಸಲು ಅವಕಾಶವಿಲ್ಲ. ಜತೆಗೆ, ದೇವಾಲಯಗಳಲ್ಲಿ ಪೂಜಾ ವಿಧಾನ, ಸಂಪ್ರದಾಯ ಅಥವಾ ಪದ್ಧತಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಧಾರ್ಮಿಕ ಪರಿಷತ್ ಗೆ ಮಾತ್ರ ಇದೆ. ಆದರೂ ಆಯುಕ್ತರು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಆದೇಶ ಹೊರಡಿಸಿದ್ದು, ಆ ಆದೇಶ ರದ್ದುಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಭಾರತೀಯ ಯುದ್ಧ ನೌಕಾಪಡೆಗೆ ಸೈಲೆಂಟ್ ಕಿಲ್ಲರ್ ಐಎನ್ಎಸ್ ಕಾರಂಜ್ ಜಲಾಂತರ್ಗಾಮಿ ಸೇರ್ಪಡೆ