ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಡಿಕೆಶಿಗೆ ಕುಮಾರಸ್ವಾಮಿ ನೇರ ಸವಾಲು: ಬಿಡದಿ ಭೂ ಕಬಳಿಕೆಯ ಇಂಚಿಂಚು ಲೆಕ್ಕ, ಕಿಡ್ನಾಪ್ ಆರೋಪದ ಬಾಂಬ್!

Kumaraswamy's direct challenge to DK: Bidadi land grab, bombshell of kidnapping allegations!

Shwetha by Shwetha
September 29, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ದೆಹಲಿ‌ To ಬಿಡದಿ ನೇರ ಸವಾಲು – ರೈತರಿಗೆ ಅಭಯ

* ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಎಂಟ್ರಿ ಕೊಟ್ಟ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

* ನಮ್ಮ ಕುಟುಂಬ ಮುಗಿಸಲು ಯತ್ನಿಸಿದ ಡಿಕೆಶಿಗೆ ಭಗವಂತನೇ ಶಿಕ್ಷೆ ಕೊಡುತ್ತಾನೆ ಎಂದು ಗುಡುಗು.

* ಹೋಟೆಲ್ ಮಾಲೀಕನಿಗೆ ಬೆದರಿಸಿ, ಯೋಧನ ಮಗಳನ್ನು ಕಿಡ್ನಾಪ್ ಮಾಡಿ ಜಮೀನು ಬರೆಸಿಕೊಂಡ ಗಂಭೀರ ಆರೋಪ.

* ರೈತರಿಗಾಗಿ ಪಾದಯಾತ್ರೆಗೂ ಸಿದ್ಧ, ಒಂದಿಂಚೂ ಭೂಮಿ ಬಿಟ್ಟುಕೊಡುವುದಿಲ್ಲವೆಂದು ರೈತರಿಗೆ ಅಭಯ.

ರಾಮನಗರ:ಬಿಡದಿ ಸಮಗ್ರ ಟೌನ್‌ಶಿಪ್‌ ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಇದೀಗ ರಾಜ್ಯ ರಾಜಕೀಯದ ಇಬ್ಬರು ಪ್ರಬಲ ನಾಯಕರ ನಡುವಿನ ನೇರ ಸಮರವಾಗಿ ಮಾರ್ಪಟ್ಟಿದೆ. ರೈತರ ಹೋರಾಟಕ್ಕೆ ಅಧಿಕೃತವಾಗಿ ಧುಮುಕಿರುವ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಭೂ ಕಬಳಿಕೆಯಿಂದ ಹಿಡಿದು ಕಿಡ್ನಾಪ್‌ವರೆಗಿನ ಗಂಭೀರ ಆರೋಪಗಳನ್ನು ಮಾಡಿ, ಇಂಚಿಂಚು ಲೆಕ್ಕ ಕೊಡುವಂತೆ ಖಡಕ್ ಸವಾಲು ಹಾಕಿದ್ದಾರೆ.

ಬಿಡದಿಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದ ಅವರು, ಡಿಕೆಶಿ ವಿರುದ್ಧ ಅಕ್ಷರಶಃ ವಾಗ್ದಾಳಿ ನಡೆಸಿದರು. “ನಮ್ಮ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಡಿ.ಕೆ. ಶಿವಕುಮಾರ್ ಏನೆಲ್ಲಾ ಆಟ ಆಡಿದ್ದಾರೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನಾನು ಭಗವಂತನನ್ನು ನಂಬಿದ್ದೇನೆ, ಆತನೇ ನಿಮಗೆ ತಕ್ಕ ಶಿಕ್ಷೆ ನೀಡುತ್ತಾನೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಳೆಯ ಕಡತ ಬಿಚ್ಚಿಟ್ಟ ಎಚ್‌ಡಿಕೆ

ಟೌನ್‌ಶಿಪ್ ವಿಚಾರದಲ್ಲಿ ತಮ್ಮ ಮೇಲಿದ್ದ ಆರೋಪಗಳನ್ನು ತಳ್ಳಿಹಾಕಿದ ಕುಮಾರಸ್ವಾಮಿ, ಡಿಕೆಶಿ ಅವರ ಹಳೆಯ ವ್ಯವಹಾರಗಳನ್ನು ಒಂದೊಂದಾಗಿ ಬಿಚ್ಚಿಟ್ಟರು. “ಇದೇ ಶಿವಕುಮಾರ್, ಬೆಂಗಳೂರಿನ ಹೊಸಕೆರೆಹಳ್ಳಿ ಮತ್ತು ಸುತ್ತಮುತ್ತ ಎಷ್ಟು ಭೂಮಿಯನ್ನು ಲಪಟಾಯಿಸಿದ್ದಾರೆ? ಬ್ರಾಹ್ಮಣರಾದ ಕೃಷ್ಣಮೂರ್ತಿ ಎಂಬುವವರು ಸಾಲ ಮಾಡಿ ಹೋಟೆಲ್ ನಡೆಸುತ್ತಿದ್ದರು. ಅವರ ಹೋಟೆಲ್‌ಅನ್ನು ಅಗ್ಗದ ಬೆಲೆಗೆ ಖರೀದಿಸಿ, ಅವರನ್ನು ಖಾಲಿ ಮಾಡಿಸಿ ಅದೇ ಜಾಗದಲ್ಲಿ ಇಂದು ಶಾಲೆ ಕಟ್ಟಿಕೊಂಡಿದ್ದಾರೆ. ಅಷ್ಟೇ ಅಲ್ಲ, ಸೇನೆಯಿಂದ ನಿವೃತ್ತರಾಗಿ ಬಂದಿದ್ದ ರಾಮಸ್ವಾಮಿ ಎಂಬುವವರ ಮಗಳನ್ನು ಅಪಹರಿಸಿ, ಹೆದರಿಸಿ ಅವರಿಂದ ಜಮೀನು ಬರೆಸಿಕೊಂಡಿದ್ದಾರೆ. ಇಂತಹ ವ್ಯಕ್ತಿಗಳಿಗೆ ನನ್ನ ಮತ್ತು ದೇವೇಗೌಡರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ?” ಎಂದು ಪ್ರಶ್ನಿಸಿದರು.

ರೈತರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ

ತಮ್ಮ ಆಡಳಿತಾವಧಿಯಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಯಾವುದೇ ಉದ್ದೇಶ ತಮಗಿರಲಿಲ್ಲ ಎಂದು ಸ್ಪಷ್ಟಪಡಿಸಿದ ಎಚ್‌ಡಿಕೆ, “ನಾನು 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ 60 ಸಾವಿರ ಕೋಟಿ ಬಂಡವಾಳ ಹೂಡಿಕೆಯೊಂದಿಗೆ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಬಯಸಿದ್ದೆ. ಯೋಜನೆಯ 9 ಸಾವಿರ ಎಕರೆಯಲ್ಲಿ ಸುಮಾರು 4 ಸಾವಿರ ಎಕರೆ ಸರ್ಕಾರಿ ಭೂಮಿ ಇದೆ ಎಂಬ ಮಾಹಿತಿ ಇತ್ತು. ಆದರೆ ಈಗ ಕೇವಲ 700 ಎಕರೆ ಇದೆ ಎಂದು ತೋರಿಸುತ್ತಿದ್ದಾರೆ. ಉಳಿದ ಭೂಮಿಯನ್ನು ಅಧಿಕಾರಿಗಳ ಜೊತೆ ಸೇರಿ ಲೂಟಿ ಹೊಡೆಯಲಾಗಿದೆ” ಎಂದು ಗಂಭೀರ ಆರೋಪ ಮಾಡಿದರು.

“ನನ್ನನ್ನು ಬೆಳೆಸಿದ ರೈತ ಸಮುದಾಯಕ್ಕೆ ನನ್ನ ಕೊನೆ ಉಸಿರು ಇರುವವರೆಗೂ ಅನ್ಯಾಯವಾಗಲು ಬಿಡುವುದಿಲ್ಲ. ನಿಮ್ಮ ಒಂದಿಂಚು ಭೂಮಿಯನ್ನೂ ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ನನ್ನ ಮಗ ನಿಖಿಲ್ ನಿಮ್ಮ ಪರವಾಗಿ ದನಿ ಎತ್ತಿದ್ದಾನೆ, ಅವನಿಗೆ ನನ್ನ ಸಂಪೂರ್ಣ ಬೆಂಬಲವಿದೆ. ಒಂದುವೇಳೆ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಸಂದರ್ಭ ಬಂದರೆ, ನನ್ನ ಆರೋಗ್ಯವನ್ನೂ ಲೆಕ್ಕಿಸದೆ ನಾನೇ ಮುಂದೆ ನಿಂತು ನಿಮ್ಮ ಜೊತೆ ಹೆಜ್ಜೆ ಹಾಕುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ,” ಎಂದು ರೈತರಿಗೆ ಧೈರ್ಯ ತುಂಬಿದರು.

ಬಿಡದಿ ಟೌನ್‌ಶಿಪ್ ವಿವಾದವು ಕುಮಾರಸ್ವಾಮಿ ಮತ್ತು ಶಿವಕುಮಾರ್ ನಡುವಿನ ವೈಯಕ್ತಿಕ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram