ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಲಹರಿ’ಯಿಂದ ಹೊರಬಂದ ರಿಕಿ ಕೇಜ್‌ ಆಲ್ಬಂ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶನ..!

Mahesh M Dhandu by Mahesh M Dhandu
December 7, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ಲಹರಿ’ಯಿಂದ ಹೊರಬಂದ ರಿಕಿ ಕೇಜ್‌ ಆಲ್ಬಂ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶನ..!

ಲಹರಿ ಮ್ಯೂಸಿಕ್‌ ಸಂಸ್ಥೆ ಕನ್ನಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಹೌದು, ಈಗಾಗಲೇ ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನದಲ್ಲಿರುವ ಈ ಸಂಸ್ಥೆ, ಇದೀಗ ಮತ್ತೊಂದು ಸಂತೋಷದ ವಿಷಯಕ್ಕೆ ಕಾರಣವಾಗಿದೆ. ಇದೇ ಮೊದಲ ಬಾರಿಗೆ ಲಹರಿ ಮ್ಯೂಸಿಕ್‌ ಸಂಸ್ಥೆಯಿಂದ ಬಿಡುಗಡೆಯಾದ ಆಲ್ಬಂವೊಂದು ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶನಗೊಂಡಿದೆ. ಸಹಜವಾಗಿಯೇ ಲಹರಿ ಮ್ಯೂಸಿಕ್‌ ಸಂಸ್ಥೆಯ ಲಹರಿ ವೇಲು ಅವರಿಗೆ ಇದು ಖುಷಿಯಾಗಿದೆ. ಅಂದಹಾಗೆ, ಭಾರತೀಯ ಚಿತ್ರತಂಗದಲ್ಲೇ ಲಹರಿ ಮ್ಯೂಸಿಕ್‌ ಸಂಸ್ಥೆಯಿಂದ ಹೊರಬಂದಿರುವ ಈ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದಕ್ಕೆ ಮುಖ್ಯ ಕಾರಣ, ಅದು ಸಂಗೀತ ನಿರ್ದೇಶಕ, ಗಾಯಕ ರಿಕಿ ಕೇಜ್.‌

Related posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026
ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

June 26, 2026

ರಿಕಿ ಕೇಜ್‌ ಅವರ “ಡಿವೈನ್‌ ಟೈಡ್ಸ್‌” ಹೆಸರಿನ ಆಲ್ಬಂ ಇದೀಗ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಹಾಗೆ ನೋಡಿದರೆ, ರಿಕ್ಕಿ ಕೇಜ್‌ ಅವರಿಗೆ ಇದೇನು ಹೊಸದಲ್ಲ. ಕಳೆದ ಐದು ವರ್ಷಗಳ ಹಿಂದೆಯೇ ರಿಕಿ ಕೇಜ್‌ ಅವರು ಗ್ರ್ಯಾಮಿ ಅವಾರ್ಡ್‌ ಪಡೆದುಕೊಂಡಿದ್ದರು. ಈಗ ಎರಡನೇ ಬಾರಿಗೆ ಅವರು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ವಿಶೇಷವೆಂದರೆ, ರಿಕಿ ಕೇಜ್‌ ಅವರ “ಡಿವೈನ್‌ ಟೈಡ್ಸ್”‌ ಆಲ್ಬಂ ಪ್ರಪಂಚದ ಅದ್ಭುತ ಆಲ್ಬಂಗಳ ಸಾಲಿಗೆ ಸೇರಿದ್ದು, ಪ್ರಪಂಚಾದ್ಯಂತ ಬಂದ ಆಲ್ಬಂಗಳನ್ನು ಹಿಂದಕ್ಕೆ ತಳ್ಳಿ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಸಹಜವಾಗಿಯೇ ಇದು ಕನ್ನಡಕ್ಕೆ ಹೆಮ್ಮೆಯ ವಿಷಯವೇ ಸರಿ. ಯಾಕೆಂದರೆ, ರಿಕಿ ಕೇಜ್‌ ಕೂಡ ಮೂಲತಃ ಕರ್ನಾಟಕದವರು. ಅದರಲ್ಲೂ ದಕ್ಷಿಣ ಭಾರತದಲ್ಲೇ ಪ್ರಖ್ಯಾತಿ ಪಡೆದಿರುವ ಲಹರಿ ಮ್ಯೂಸಿಕ್‌ ಸಂಸ್ಥೆಯಡಿ ಈಗಾಗಲೆ 1.26  ಲಕ್ಷ ಆಲ್ಬಂ ಹಾಡುಗಳಿವೆ. ಸೂಪರ್‌ ಹಿಟ್‌ ಹಾಡುಗಳನ್ನು ಕೊಟ್ಟಿರುವ ಲಹರಿ ಮ್ಯೂಸಿಕ್‌ ಸಂಸ್ಥೆ ಕನ್ನಡಿಗರ ಪ್ರೀತಿಗೆ ಪಾತ್ರವಾಗಿದೆ. ಈಗ ಇದೇ ಮೊದಲ ಸಲ “ಡಿವೈನ್‌ ಟೈಡ್ಸ್‌” ಆಲ್ಬಂ ಲಹರಿ ಸಂಸ್ಥೆಯಡಿ ಬಂದಿದ್ದು, ಆ ಆಲ್ಬಂ ಗ್ರ್ಯಾಮಿ ಅವಾರ್ಡ್‌ಗೆ ಹೋಗಿರೋದು ಸಂತಸದ ವಿಷಯ. ಭಾರತದಲ್ಲೇ ಮೊದಲ ಬಾರಿಗೆ ಲಹರಿ ಸಂಸ್ಥೆ ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶನಗೊಂಡಿರುವ ಬಗ್ಗೆ ಸ್ವತಃ ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರೇ ಸಂತೋಷಗೊಂಡಿದ್ದಾರೆ.

ಅಂದಹಾಗೆ, 64 ನೇ ವಾರ್ಷಿಕ ಗ್ರ್ಯಾಮಿ ಅವಾರ್ಡ್‌ಗೆ “ಡಿವೈನ್ ಟೈಡ್ಸ್” ಎಂಬ ಅದ್ಭುತ ಆಲ್ಬಂ ನಾಮನಿರ್ದೇಶನಗೊಂಡಿದೆ. ಸ್ಟೀವರ್ಟ್ ಕೋಪ್ಲ್ಯಾಂಡ್ (ಪೊಲೀಸ್) ಮತ್ತು ರಿಕಿ ಕೇಜ್ ‘ಡಿವೈನ್ ಟೈಡ್ಸ್’ ಗಾಗಿ ಗ್ರ್ಯಾಮಿ ನಾಮನಿರ್ದೇಶನವನ್ನು ಪಡೆದುಕೊಂಡಿದ್ದಾರೆ. ಈ ನಾಮನಿರ್ದೇಶನದ ಕುರಿತಂತೆ ರೆಕಾರ್ಡಿಂಗ್ ಅಕಾಡೆಮಿಯ ಸಿಇಒ ಹಾರ್ವೆ ಮೇಸನ್ ಜೂನಿಯರ್ ಅವರು ಘೋಷಣೆ ಮಾಡಿದ್ದಾರೆ. ಕಳೆದ 2015ರಲ್ಲಿ ರಿಕಿ ಕೇಜ್ ಅವರ “ವಿಂಡ್ಸ್ ಆಫ್ ಸಂಸಾರ” ಎಂಬ ಆಲ್ಬಂಗೆ ಗ್ರ್ಯಾಮಿ ಪ್ರಶಸ್ತಿ ಲಭಿಸಿತ್ತು. ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಅವರ ಆದರ್ಶಗಳನ್ನು ಆಧರಿಸಿ, ‘ವಿಂಡ್ಸ್ ಆಫ್ ಸಂಸಾರ’ ಆಲ್ಬಂ ಬಂದು ಅದು ಯಶಸ್ವಿಯಾಗಿತ್ತು. ಇದರೊಂದಿಗೆ ಯುಎಸ್‌ನ ಬಿಲ್‌ಬೋರ್ಡ್ ನ್ಯೂ ಏಜ್ ಆಲ್ಬಮ್‌ಗಳ ಚಾರ್ಟ್‌ನಲ್ಲಿ  ಮೊದಲ ಸ್ಥಾನದಲ್ಲಿತ್ತು. ಇದು ಭಾರತೀಯ ಮೂಲದ ವ್ಯಕ್ತಿಗೆ ಮೊದಲನೆ ಪ್ರಶಸ್ತಿ ಎಂಬುದು ವಿಶೇಷವಾಗಿತ್ತು. ರಿಕಿ ಗ್ರ್ಯಾಮಿ ಪ್ರಶಸ್ತಿ ಗೆದ್ದ ಭಾರತದ ಅತ್ಯಂತ ಕಿರಿಯ ವ್ಯಕ್ತಿ ಮತ್ತು 4 ನೇ ಭಾರತೀಯ. 5-ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತರಾಗಿರುವ ಸ್ಟೀವರ್ಟ್ ಕೋಪ್ಲ್ಯಾಂಡ್ ಅವರು ಪೌರಾಣಿಕ ಬ್ರಿಟಿಷ್ ರಾಕ್ ಗ್ರೂಪ್‌ನ ‘ದಿ ಪೋಲಿಸ್’ ಸ್ಥಾಪಕ ಮತ್ತು ಡ್ರಮ್ಮರ್ ಆಗಿದ್ದಾರೆ.

ಪ್ರಪಂಚದಾದ್ಯಂತದ ಕಲಾವಿದರನ್ನು ಒಳಗೊಂಡಿರುವ ಪ್ರಸ್ತುತ ಗ್ರ್ಯಾಮಿ ನಾಮನಿರ್ದೇಶಿತ ಸಂಗೀತ ಆಲ್ಬಂ ‘ಡಿವೈನ್ ಟೈಡ್ಸ್’ ನಮ್ಮ ನೈಸರ್ಗಿಕ ಪ್ರಪಂಚದ ವೈಭವ ಮತ್ತು ಜಾತಿಗಳ ಸ್ಥಿತಿ ಸ್ಥಾಪಕತ್ವಕ್ಕೆ ಗೌರವವಾಗಿದೆ. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಆಲ್ಬಂ 9 ಹಾಡುಗಳು ಮತ್ತು 8 ಸಂಗೀತ ವೀಡಿಯೊಗಳನ್ನು ಒಳಗೊಂಡಿದೆ, ಇದನ್ನು ಭಾರತೀಯ ಹಿಮಾಲಯದ ಸೊಗಸಾದ ಸೌಂದರ್ಯದಿಂದ ಸ್ಪೇನ್‌ನ ಹಿಮಾವೃತ ಕಾಡುಗಳವರೆಗೆ ವಿಶ್ವದಾದ್ಯಂತ ಚಿತ್ರೀಕರಿಸಲಾಗಿದೆ. ‘ಡಿವೈನ್ ಟೈಡ್ಸ್’ ಈಗಾಗಲೇ ಪ್ರಪಂಚದಾದ್ಯಂತದ ವಿವಿಧ ಉತ್ಸವಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ದಕ್ಷಿಣ ಭಾರತದ ಪ್ರಮುಖ ರೆಕಾರ್ಡ್ ಲೇಬಲ್ ಆದ ಲಹರಿ ಮ್ಯೂಸಿಕ್‌ನಿಂದ ಸಂಗೀತ ವೀಡಿಯೊಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ. 64 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿ ಸಮಾರಂಭ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಜನವರಿ 31, 2022 ರಂದು ನಡೆಯಲಿದೆ. ಈ ಸಮಾರಂಭದಲ್ಲಿ ವಿಜೇತರನ್ನು ಘೋಷಿಸಲಾಗುವುದು.

ಆರ್.ಕೆ ನಿರ್ದೇಶನದಲ್ಲಿ “ಕಾಣಿಯಾಗಿದ್ದಾಳೆ” ಹುಡುಕಿ ಕೊಟ್ಟವರಿಗೆ ಬಹುಮಾನ..!

“ದೃಶ್ಯ 2” ಗೆ ಸಿಕ್ತು ಯು\ಎ ಪ್ರಮಾಣ ಪತ್ರ

Tags: #saakshatvgrammmy awardslahari audiolahari veluricky kage album song
ShareTweetSendShare
Join us on:

Related Posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram