LakhimpurKheri: ಬಸ್ ಮತ್ತು ಟ್ರಕ್ ನಡುವೆ ಭೀಕರ ಅಫಘಾತ – 8 ಮಂದಿ ಸಾವು…
ಖಾಸಗಿ ಬಸ್ಗೆ ಟ್ರಕ್ ಡಿಕ್ಕಿ ಹೊಡೆದು 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ನಡೆದಿದೆ.
ಬಸ್ ಧೌರೆಹ್ರಾದಿಂದ ಲಕ್ನೋಗೆ ತೆರಳುತ್ತಿದ್ದಾಗ ಇಸಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎರಾ ಸೇತುವೆ ಬಳಿ ಅಪಘಾತ ಸಂಭವಿಸಿದೆ. ಎಲ್ಲಾ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಇತರರನ್ನು ಉತ್ತಮ ಚಿಕಿತ್ಸೆಗಾಗಿ ಲಖನೌಗೆ ಶಿಫಾರಸು ಮಾಡಲಾಗಿದೆ ಎಂದು ಲಖಿಂಪುರ ಖೇರಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಸಂಜಯ್ ಕುಮಾರ್ ತಿಳಿಸಿದ್ದಾರೆ.
ಮಾಹಿತಿ ಪಡೆದ ಎಡಿಎಂ ಮತ್ತು ಸರ್ಕಲ್ ಆಫೀಸರ್ (ಸಿಒ) ಜಿಲ್ಲಾ ಆಸ್ಪತ್ರೆಗೆ ತಲುಪಿದರು. ಅಪಘಾತಕ್ಕೆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
Lakhimpur Kheri: Six persons were killed and several injured when a bus collided head on with a DCM vehicle near Sharda bridge on Pilibhit Basti Highway in Lakhimpur Kheri district on Wednesday morning. pic.twitter.com/XI7RF7d8W8
— Ahmed Khabeer احمد خبیر (@AhmedKhabeer_) September 28, 2022
“ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹಾರಾಜ್ ಅವರು ಲಖಿಂಪುರ ಖೇರಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಯೋಗಿ ಹಿರಿಯ ಅಧಿಕಾರಿಗಳಿಗೆ ತಕ್ಷಣ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಸೂಚಿಸಿದ್ದಾರೆ” ಎಂದು ಸಿಎಂಒ ತಿಳಿಸಿದ್ದಾರೆ.
Lakhimpur Kheri: 8 dead, 12 critical after head-on collision of bus, truck in UP’s Lakhimpur Kheri