ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಇಲ್ಲ – ಲಕ್ಷಣ ಸವದಿ
ಮೈಸೂರು: ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಇಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಬೆಲೆ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ ಕರೊನಾ ಸಂಕಷ್ಟ ಇರುವ ಕಾರಣಕ್ಕಾಗಿ ಸದ್ಯಕ್ಕೆ ಬೆಲೆ ಏರಿಕೆ ಇಲ್ಲ. ಈಗಷ್ಟೇ ಲಾಕ್ ಡೌನ್ ಅನ್ಲಾಕ್ ಆಗಿದೆ. ಜನಕ್ಕೆ ಈಗಲೂ ಬಸ್ನಲ್ಲಿ ಓಡಾಡಿದರೆ ಕರೊನಾ ಬರುತ್ತೆ ಅನ್ನುವ ಭಯ ಇದೆ. ಜನರಿಗೂ ಲಾಕ್ಡೌನ್ನಿಂದಾಗಿ ತೊಂದರೆ ಆಗಿದೆ. ಈ ಸಂದರ್ಭದಲ್ಲಿ ಟಿಕೆಟ್ ದರ ಏರಿಸಿದರೆ ಇನ್ನಷ್ಟು ಸಮಸ್ಯೆ ಆಗುತ್ತೆ. ಆದ್ದರಿಂದ ಬೆಲೆ ಏರಿಕೆ ಮಾಡುತ್ತಿಲ್ಲ ಎಂದಿದ್ದಾರೆ.
ಇದೇ ವೇಳೆ ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿ ನೌಕರರು 9 ಬೇಡಿಕೆ ಮುಂದಿಟ್ಟಿದ್ದರು. 8 ಬೇಡಿಕೆ ಈಡೇರಿಸಿದ್ದೇವೆ. ವೇತನ ಪರಿಷ್ಕರಣೆ ಮಾಡಬೇಕು ಅಂತ ಕೇಳುತ್ತಿದ್ದಾರೆ. ಲಾಕ್ ಡೌನ್ನಿಂದಾಗಿ ನಿಗಮಕ್ಕೆ 4000 ಕೋಟಿ ರೂ. ನಷ್ಟ ಆಗಿದೆ. ಈಗ ಬರುತ್ತಿರುವ ಆದಾಯ ಇಂಧನಕ್ಕೂ ಸಾಲುತ್ತಿಲ್ಲ. ನಿಗಮಕ್ಕೆ ಆದಾಯ ಬರಲು ಶುರುವಾದ ನಂತರ ವೇತನ ಪರಿಷ್ಕರಣೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸಿಎಂ ಬದಲಾಯಿಸದಿದ್ದರೆ ಬಿಜೆಪಿಗೆ ಉಳಿಗಾಲವಿಲ್ಲ : ಯತ್ನಾಳ