ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?
ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ ತತ್ವಗಳು, ವಾಡಿಕೆಗಳೇನು? ಅನೇಕ ಜನ ದೂರದರ್ಶನ ವಾಹಿನಿಗಳ ಪಾಠಗಳಿಂದ ಏನೇನೋ ಮಾಡ ಹೋಗಿ ಕೊನೆಗೆ ಗೊಂದಲದಲ್ಲಿ ಬಿದ್ದಿದ್ದೂ ಇದೆ. ನಾವು ‘ತಸ್ಮತ್ ಶಾಸ್ತ್ರ ಪ್ರಮಾಣೇಶು’ ಎಂದಂತೆ ಶಾಸ್ತ್ರ ವಚನವನ್ನು ಮಾತ್ರ ಹೇಳ ಬಹುದಷ್ಟೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ತಿಲ ತೈಲ (ಎಳ್ಳೆಣ್ಣೆ) ಮತ್ತು ಘೃತ (ತುಪ್ಪ) ದೀಪಗಳು
(ತೆಂಗಿನ ಎಣ್ಣೆಯನ್ನು ಕೂಡ ಬಳಸಬಹುದು)
ಮನೆಯೊಳಗೆ ದೇವರ ಕೋಣೆಯಲ್ಲಿಡಲು ಯೋಗ್ಯ. ಇನ್ಯಾವುದೇ ತೈಲಗಳು ದೇವರಿಗೆ ಯೋಗ್ಯವಲ್ಲ. ಆ ಇತರ ತೈಲಗಳು ವಾಮ ಪ್ರಯೋಗಾದಿಗಳಿಗೆ ಸಂಬಂಧಿಸಿದ್ದಾಗಿದೆ. ತಿಲವು ಪಾಪಹರವಾದರೆ, ಘೃತವು ಮೋಕ್ಷದಾಯಕ.
ಒಂದು ಸ್ಥಂಬದಲ್ಲಿ ಒಂದೇ ದೀಪ ಉರಿಯ ಬೇಕು ಅಥವಾ ದೀಪ ನಮಸ್ಕಾರ, ಉದ್ಘಾಟನೆಗಳ ಸಂದರ್ಭಗಳಲ್ಲಿ ಐದು (ಅದಕ್ಕಿಂತ ಹೆಚ್ಚು) ದೀಪ ಒಂದೇ ಸ್ಥಂಭದಲ್ಲಿ ಉರಿಯ ಬೇಕು.
*ಎರಡು ದೀಪ ಒಂದೇ ಸ್ಥಂಭದಲ್ಲಿದ್ದರೆ ಇದು ಭಿನ್ನಾಭಿಪ್ರಾಯ ಸೂಚಕ.
*ಮೂರು ಇದ್ದರೆ ಮರಣ ಸೂಚಕ.(ಒಂದೇ ಸ್ಥಂಭದಲ್ಲಿದ್ದರೆ)
*ನಾಲ್ಕು ಇದ್ದರೆ ಗೊಂದಲ.
*ಐದು ದೀಪಗಳು ಆರಾಧನೆಗೆ ಮಾತ್ರ.
ಇದರಲ್ಲಿ ಬತ್ತಿಗಳ ಪ್ರಮಾಣ:
*ಎರಡು ಬತ್ತಿ ದೇಹ ಮತ್ತು ಪ್ರಾಣಗಳ ಸಂಕೇತ.
*ಮೂರು ಬತ್ತಿ ತ್ರಿಶಕ್ತಿ ರೂಪ.
*ನಾಲ್ಕು ಬತ್ತಿಯು ಉತ್ತಮವಲ್ಲ.
*ಐದು ಬತ್ತಿಗಳು ಪಂಚಭೂತಗಳ ಸಂಕೇತ.
ಹಾಗಾಗಿ ನಾಲ್ಕು ಬತ್ತಿ ಬಿಟ್ಟು ಯಾವುದನ್ನೂ ಹಾಕ ಬಹುದು. ಆದರೂ ಎರಡು ಬತ್ತಿಯೇ ಮನಗಳಲ್ಲಿ ಶ್ರೇಷ್ಟ. ದೀಪ ಸ್ಥಂಭ, ದೀಪದ ಇಂಧನ ತೈಲವು ಮಲಿನ ಆಗಿರ ಬಾರದು. ಹಾತೆ, ಕೀಟಾದಿಗಳು ಬಿದ್ದಿದ್ದರೆ ಅದನ್ನು ಶುಚಿಯಾಗಿಡ ಬೇಕು. ಎಳ್ಳೆಣ್ಣೆ ಮತ್ತು ತುಪ್ಪ ಮಿಶ್ರಣವಾಗಲೇ ಬಾರದು. ಕೈಯಲ್ಲಿ ಯಾವುದಾದರೂ ಬೇರೆ ತೈಲ ಇದ್ದರೆ ಇನ್ನೊಂದು ತೈಲ ಮುಟ್ಟ ಬೇಕಾದರೆ ಕೈಯ್ಯನ್ನು ಪ್ರಕ್ಷಾಳನ (ತೊಳೆದು) ಮಾಡಿಯೇ ಮುಟ್ಟ ಬೇಕು. ಅಂದರೆ ತುಪ್ಪದ ಕೈಯಲ್ಲಿ ಎಳ್ಳೆಣ್ಣೆ ಮುಟ್ಟ ಬಾರದು ಎಂದರ್ಥ.
ದೇವರ ದೀಪವನ್ನು ದೇವರ ಬಲ ಭಾಗದಲ್ಲಿಡ ಬೇಕು. (ಒಂದೇ ದೀಪ ಇಡುವುದಿದ್ದರೆ ಮಾತ್ರ. ಎರಡಿದ್ದರೆ ಎಡ ಬಲಗಳಲ್ಲಿ ಇಡ ಬಹುದು) ದೀಪದ ಮುಖ ಯಾವಾಗಲೂ ನಮ್ಮ ಅಂದರೆ ಪೂಜಿಸುವವರ ಕಡೆಗೆ, ಪೂರ್ವಾಭಿಮುಖ, ಉತ್ತರಾಭಿಮುಖ ಅಥವಾ ದೇವರ ಕಡೆ ಸ್ವಲ್ಪ ವಾಲುವಂತೆಯೂ ಇಡ ಬಹುದು. ಇದು ಶಾಸ್ತ್ರೋಕ್ತವಾದ ದೀಪ ಲಕ್ಷಣ…
ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564








