ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ.
ಬಿಹಾರ ಮೂಲದ ಚಂದನ್ (30) ಸಾವನ್ನಪ್ಪಿದ ದುರ್ದೈವಿ. ಚಂದನ್ ರಕ್ಷಣೆಗಾಗಿ ಸತತ 7 ಗಂಟೆ ಕಾರ್ಯಾಚರಣೆ ನಡೆಸಲಾಗಿತ್ತು. ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕದಿಂದ ರಕ್ಷಿಸಲು ತೀವ್ರ ಪ್ರಯತ್ನ ಮಾಡಿದರೂ ಆ ವ್ಯಕ್ತಿ ಬದುಕುಳಿದಿಲ್ಲ.
ನಗರದ ಬಲ್ಮಠ (Balmata, Mangaluru) ರಸ್ತೆಯಲ್ಲಿ ಕಟ್ಟಡದ ಮಣ್ಣು ಕುಸಿದು ಚಂದನ್ ಕುಮಾರ್ (30) ಮತ್ತು ರಾಜಕುಮಾರ್ (18) ಮಣ್ಣಿನಡಿ ಸಿಲುಕಿದ್ದರು. ಕೂಡಲೇ ಕಾರ್ಯಾಚರಣೆ ನಡೆಸಲಾಯಿತು. ರಾಜಕುಮಾರ್ ಅವರನ್ನು ರಕ್ಷಣೆ ಮಾಡಲಾಗಿತ್ತು. ಅಲ್ಲದೇ ಅವರನ್ನು ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಇನ್ನೊಂದೆಡೆ ಮಣ್ಣಿನಡಿ ಸಿಲುಕಿದ್ದ ಇನ್ನೋರ್ವ ಕಾರ್ಮಿಕ ಚಂದನ್ ರಕ್ಷಣೆಗೆ ಸತತ ಪ್ರಯತ್ನ ನಡೆಸಲಾಗಿತ್ತು. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ನಡೆದಿತ್ತು. ನಿರಂತರವಾಗಿ ಮಣ್ಣು ತೆಗೆದು ಕಾಂಕ್ರಿಟ್ ಕೊರೆದು ಕಾರ್ಮಿಕನಿಗೆ ಚಿಕಿತ್ಸೆ ನೀಡಲಾಯಿತು. ಆದರೂ ಕಾರ್ಮಿಕನನ್ನು ಉಳಿಸಿಕೊಳ್ಳಲು ಆಗಲಿಲ್ಲ.