ಪ್ರಮುಖ ರಾಜಕೀಯ ಸುದ್ದಿಗಳು : LATEST UPDATES
ಪೂರ್ಣ ಸುದ್ದಿಗಳನ್ನು ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ
ಸಿದ್ದರಾಮಯ್ಯ ಯಾವತ್ತೂ ಹುಲಿನೇ : ಆರ್.ಧ್ರುವನಾರಾಯಣ
ಸಿದ್ದರಾಮಯ್ಯ ಯಾವತ್ತೂ ಹುಲಿನೇ : ಆರ್.ಧ್ರುವನಾರಾಯಣ
ಚಾಮರಾಜನಗರ : ಸಿದ್ದರಾಮಯ್ಯ ಯಾವತ್ತೂ ಹುಲಿನೇ, ಇಂತಹ ಇಲಿಗಳಿಂದ ನಾವು ಏನು ನಿರೀಕ್ಷೆ ಮಾಡಲ್ಲ ಅಂತಾ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ಅವರು ಹುಲಿಯಂತೆ ಅಬ್ಬರಿಸುತ್ತಿದ್ದರು. ಆದ್ರೆ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯರನ್ನ ಬೋನಿನಲ್ಲಿ ಕೂಡಿ ಹಾಕಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಚಾಮರಾಜನಗರದಲ್ಲಿ ಆರ್.ಧ್ರುವನಾರಾಯಣ ಅವರು ಟಾಂಗ್ ನೀಡಿದ್ದಾರೆ.
ನಗರದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಧ್ರುವನಾರಾಯಣ್, ಮಾಜಿ ಸಿಎಂ ಸಿದ್ದರಾಮಯ್ಯ ಯಾವತ್ತೂ ಹುಲಿನೇ. ಬಿಜೆಪಿಯವರು ಇತಿಹಾಸದಲ್ಲೇ ಮೊದಲ ಬಾರಿಗೆ ಮೈಸೂರು ಮೇಯರ್ ಆಗುತ್ತೇವೆ ಅಂತಾ ಸಡಗರದಲ್ಲಿ ಇದ್ದರು.
ನಮ್ಮದು ವ್ಯಕ್ತಿ ಪೂಜೆ ಮಾಡುವ ಪರಂಪರೆಯಲ್ಲ : ಸಿದ್ದುಗೆ ತನ್ವೀರ್ ಟಾಂಗ್
ನಮ್ಮದು ವ್ಯಕ್ತಿ ಪೂಜೆ ಮಾಡುವ ಪರಂಪರೆಯಲ್ಲ : ಸಿದ್ದುಗೆ ತನ್ವೀರ್ ಟಾಂಗ್
ಮೈಸೂರು : ನಮ್ಮದು ವ್ಯಕ್ತಿ ಪೂಜೆ ಮಾಡುವ ಪರಂಪರೆಯಲ್ಲ. ಇತ್ತೀಚೆಗೆ ವ್ಯಕ್ತಿ ಪೂಜೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಹೇಳದೆ ತನ್ವೀರ್ ಸೇಠ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ಮೇಯರ್ ಚುನಾವಣೆ ಕಾಂಗ್ರೆಸ್ ನಲ್ಲಿ ಸಂಚನಲ ಮೂಡಿದೆ. ಇಷ್ಟು ಒಳಗೊಳಗೆ ಕುದಿಯುತ್ತಿದ್ದ ಅಸಮಾಧಾನಧ ಜ್ವಾಲೆ ಈಗ ಸಣ್ಣದಾಗಿ ಸ್ಫೋಟಿಸುತ್ತಿದೆ. ತಮಗೆ ತಿಳಿಸದೇ ಮೈಸೂರಿನಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಕಾರಣವಾಗಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ತನ್ವೀರ್ ಸೇಠ್ ವಿರುದ್ಧ ಗರಂ ಆಗಿದ್ದಾರೆ. ಹೀಗಾಗಿ ಪಕ್ಷದಲ್ಲಿ ಎರಡು ಬಣಗಳಾಗಿವೆ ಅನ್ನೋದು ರಾಜಕೀಯವಲಯದಲ್ಲಿ ಹರಿದಾಡುತ್ತಿರುವ ಮಾತುಗಳು.
ಕಾಂಗ್ರೆಸ್ ಬಿಟ್ಟು ಹೋದರೆ ಯಾರೂ ನಾಯಕರಲ್ಲ : ಯು.ಟಿ.ಖಾದರ್
ಕಾಂಗ್ರೆಸ್ ಬಿಟ್ಟು ಹೋದರೆ ಯಾರೂ ನಾಯಕರಲ್ಲ : ಯು.ಟಿ.ಖಾದರ್
ಚಾಮರಾಜನಗರ : ಕಾಂಗ್ರೆಸ್ ಎಲ್ಲರಿಗೂ ಕೊಡೆ ಇದ್ದಂರೆ. ಕಾಂಗ್ರೆಸ್ ಬ್ಯಾನರ್ ನಲ್ಲಿದ್ದರಷ್ಟೆ ಎಲರಲೂ ನಾಯಕರು. ಪಕ್ಷ ಬಿಟ್ಟು ಹೋದರೇ ಯಾರೂ ನಾಯಕರಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ನಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದ್ಯಾ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಬ್ಯಾನರ್ ನಲ್ಲಿದ್ದರಷ್ಟೇ ಎಲ್ಲರೂ ನಾಯಕರು.
ಕಾಂಗ್ರೆಸ್ ಬಿಟ್ಟು ಹೋದರೆ ಯಾರೂ ನಾಯಕರಲ್ಲ. ಕಾಂಗ್ರೆಸ್ ಪಾರ್ಟಿಯೇ ನಾಯಕ. ಕಾಂಗ್ರೆಸ್ ಎಲ್ಲರಿಗೂ ಕೊಡೆ ಇದ್ದಂತೆ.
ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಹೈಕಮಾಂಡ್ ಹೇಳಿದಂತೆ ನಾಯಕರು ನಡೆದುಕೊಳ್ಳುತ್ತಾರೆ ಅಂತಾ ಹೇಳಿದ್ರು.
ಹೆಚ್.ಡಿ.ಕುಮಾರಸ್ವಾಮಿ ಕೂಡ ಇಸ್ಪೀಟ್ ಆಡ್ತಾರೆ : ಸಿ.ಪಿ.ಯೋಗೇಶ್ವರ್
ಹೆಚ್.ಡಿ.ಕುಮಾರಸ್ವಾಮಿ ಕೂಡ ಇಸ್ಪೀಟ್ ಆಡ್ತಾರೆ : ಸಿ.ಪಿ.ಯೋಗೇಶ್ವರ್
ಬೆಂಗಳೂರು : ಇಸ್ಪೀಟ್ ಹಣದಲ್ಲಿ ಸರ್ಕಾರ ನಡೆಸುತ್ತಿದ್ದಾರೆ ಅನ್ನೋ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಿ.ಪಿ ಯೋಗೇಶ್ವರ್ ‘ ಕುಮಾರಸ್ವಾಮಿ ಕೂಡ ಇಸ್ಪೀಟ್ ಆಡ್ತಾರೆ. ಅದರ ಫೋಟೋಗಳು ನನ್ನ ಹತ್ರ ಇದೆ ಎಂದು ಟಾಂಗ್ ನೀಡಿದ್ದಾರೆ.
ಯೋಗೇಶ್ವರ್ ಒಬ್ಬ ಬಚ್ಚಾ ಎಂಬ ಕುಮಾರಸ್ವಾಮಿ ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯೆ ನೀಡಿದ ಯೋಗೇಶ್ವರ್, ಹೌದು, ನಾನು ಬಚ್ಚಾ. ರಾಜಕೀಯವಾಗಿ ನಾನಿನ್ನೂ ಬಚ್ಚಾನೇ. ಆದ್ರೆ ಕುಮಾರಸ್ವಾಮಿ ರಾಮನಗರಕ್ಕೆ ಬಂದಾಗ ಕೂಡ ಬಚ್ಚಾನೇ ಆಗಿದ್ದರು ಅಂತಾ ಹೇಳಿದ್ದಾರೆ.
ಕುಮಾರಸ್ವಾಮಿ ಅವ್ರ ಜೆಡಿಎಸ್ ಜೋಕರ್ ತರಹ : ಸಿಪಿ ಯೋಗೇಶ್ವರ್ ವಾಗ್ದಾಳಿ
ಕುಮಾರಸ್ವಾಮಿ ಅವ್ರು ಜೆಡಿಎಸ್ ಜೋಕರ್ ತರಹ : ಸಿಪಿ ಯೋಗೇಶ್ವರ್ ವಾಗ್ದಾಳಿ
ಮಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಗುರುವಾರ ಚನ್ನಪಟ್ಟಣದಲ್ಲಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಇದೀಗ ಮಂಗಳೂರಿನಲ್ಲಿ ಕುಮಾರಸ್ವಾಮಿ ಅವರ ಜೆಡಿಎಸ್ ಜೋಕರ್ ತರಹ ಅಂತಾ ಟೀಕೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ರಾಜಕೀಯವಾಗಿ ನೈತಿಕತೆ, ಸಿದ್ಧಾಂತ ಇಲ್ಲ.
ಅವ್ರ ಪಕ್ಷ ಜೋಕತ್ ರೀತಿ ಒಂದು ಬಾರಿ ಬಿಜೆಪಿ, ಇನ್ನೊಂದು ಬಾರಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ. ಅವರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಅಂತಾ ಕಿಡಿಕಾರಿದ್ರು.
ಇನ್ನು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಉಡಾಫೆ, ಉದಾಸೀನ ಮಾಡುತ್ತಾ ಸಿಎಂ ಸ್ಥಾನದ ಗಾಂಭೀರ್ಯ ಬಿಟ್ಟು ಕಾಲ ಕಳೆದು ಬಿಟ್ಟರು. ಈಗ ಅವರು ಅಧಿಕಾರ ಕಳೆದುಕೊಂಡಿದ್ದಾರೆ.