ADVERTISEMENT
Friday, November 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

“ನಿನ್ನ ಜ್ಞಾನವಿಲ್ಲದ ಮಾತಿನಿಂದ ದೇಶವೇ ನಗುತ್ತಿದೆ”: ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಗುಡುಗು!

Laugh at the constituency with the words of the legislator; MP Sudhakar's argument against Pradeep Eshwar

Shwetha by Shwetha
October 22, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಜ್ಞಾನವಿಲ್ಲದ ಮಾತುಗಳಿಂದಾಗಿ ಇಡೀ ದೇಶ ಹಾಗೂ ರಾಜ್ಯದ ಜನರು ನಮ್ಮ ಕ್ಷೇತ್ರದತ್ತ ನೋಡಿ ನಗುವಂತಾಗಿದೆ. ಇದರಿಂದ ನಮ್ಮ ಕ್ಷೇತ್ರ ನಗೆಪಾಟಲಿಗೀಡಾಗುತ್ತಿದೆ ಎಂದು ಸಂಸದ ಡಾ. ಕೆ. ಸುಧಾಕರ್ ಅವರು ಹೆಸರು ಹೇಳದೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಥಳೀಯ ಶಾಸಕರ ನಡವಳಿಕೆಯಿಂದ ಕ್ಷೇತ್ರದ ಗೌರವಕ್ಕೆ ಧಕ್ಕೆಯಾಗುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Related posts

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

November 6, 2025
ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

November 6, 2025

ಸೋಶಿಯಲ್ ಮೀಡಿಯಾ ನೋಡಿ ಜ್ಞಾನೋದಯ ಮಾಡಿಕೊಳ್ಳಲಿ

“ಕೆಲವರಿಗೆ ದೇಶದಲ್ಲಿ ಏನು ನಡೆಯುತ್ತಿದೆ ಎಂಬ ಕನಿಷ್ಠ ಜ್ಞಾನವೂ ಇಲ್ಲ. ಮಾಹಿತಿ ಇಲ್ಲದೆ ಉಡಾಫೆ ಮಾತುಗಳನ್ನಾಡುವುದನ್ನು ನಿಲ್ಲಿಸಬೇಕು. ಕನಿಷ್ಠಪಕ್ಷ ತಮ್ಮ ಬಗ್ಗೆ ಬರುವ ಸೋಶಿಯಲ್ ಮೀಡಿಯಾ ಕಾಮೆಂಟ್‌ಗಳನ್ನಾದರೂ ಓದಿದರೆ ಅವರಿಗೆ ಜ್ಞಾನೋದಯ ಆಗಬಹುದು. ಈ ವ್ಯಕ್ತಿಯಿಂದಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವು ರಾಷ್ಟ್ರಮಟ್ಟದಲ್ಲಿ ಹಾಸ್ಯಾಸ್ಪದವಾಗಿದೆ. ನಾನು ಎಲ್ಲಿಗೆ ಹೋದರೂ ಜನರು ನನ್ನನ್ನು ಪ್ರಶ್ನಿಸಿ ನಗುತ್ತಾರೆ,” ಎಂದು ಸುಧಾಕರ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಮೋದಿ ಸರ್ಕಾರ ತಾರತಮ್ಯ ಮಾಡಿಲ್ಲ

ಕರ್ನಾಟಕದಲ್ಲಿನ ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಎರಡು ದಿನಗಳ ಹಿಂದೆಯೇ ಅನುದಾನ ಬಿಡುಗಡೆ ಮಾಡಿದೆ. “ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶದ ಪ್ರತಿಯೊಬ್ಬ ಪ್ರಜೆಯನ್ನೂ ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುತ್ತಾರೆಯೇ ಹೊರತು, ಯಾರದ್ದೋ ಮಾತು ಕೇಳಿ ಕಲಿಯಬೇಕಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಎಂಬ ಕಾರಣಕ್ಕೆ ಯಾವುದೇ ತಾರತಮ್ಯ ಮಾಡಿಲ್ಲ. ಯುಪಿಎ ಸರ್ಕಾರದ ಕಾಲದಲ್ಲಿ ರೈಲ್ವೆ ಯೋಜನೆಗಳಿಗೆ ಸಿಕ್ಕಿದ್ದ ಅನುದಾನಕ್ಕೂ, ನಮ್ಮ ಸರ್ಕಾರದ ಅವಧಿಯಲ್ಲಿ ಸಿಕ್ಕಿದ್ದಕ್ಕೂ ಹೋಲಿಕೆ ಮಾಡಿ ನೋಡಲಿ,” ಎಂದು ಸವಾಲು ಹಾಕಿದರು.

ಹಿಂದೂಗಳ ಕೆರಳಿಸುವಿಕೆ, ಅಲ್ಪಸಂಖ್ಯಾತರ ಓಲೈಕೆ

ಆರ್‌ಎಸ್‌ಎಸ್‌ ಸಂಘಟನೆಯ ಬಗ್ಗೆ ದಿನೇಶ್ ಗುಂಡೂರಾವ್ ಅವರ ಹೇಳಿಕೆಗಳನ್ನು ಖಂಡಿಸಿದ ಸುಧಾಕರ್, “ಆರ್‌ಎಸ್‌ಎಸ್‌ನವರು ದೇವಲೋಕದಿಂದ ಬಂದವರು ಎಂದು ಎಲ್ಲೂ ಹೇಳಿಲ್ಲ. ಬಹುಸಂಖ್ಯಾತ ಹಿಂದೂಗಳನ್ನು ಕೆರಳಿಸುವ ಕ್ಷುಲ್ಲಕ ಮಾತುಗಳನ್ನು ಕಾಂಗ್ರೆಸ್‌ನವರು ನಿಲ್ಲಿಸಬೇಕು. ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿರುವ ಸಂಘಟನೆಯನ್ನು ನೋಯಿಸಿ ಏನು ಸಾಧಿಸುತ್ತೀರಿ? ಜಾತಿ ಸಮೀಕ್ಷೆ, ಧರ್ಮಸ್ಥಳ, ವೀರಶೈವ-ಲಿಂಗಾಯತ ಸಮುದಾಯ ಹೀಗೆ ಎಲ್ಲವನ್ನೂ ವಿರೋಧಿಸುತ್ತಾ, ಕೇವಲ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ,” ಎಂದು ಆರೋಪಿಸಿದರು.

ಬೆಂಗಳೂರು ಬೆಳವಣಿಗೆಗೆ ಹಿಂದಿನ ಸರ್ಕಾರಗಳೇ ಕಾರಣ

ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊಸ ಕಂಪನಿಗಳು ಬರುವುದು ದೂರದ ಮಾತು, ಇರುವ ಕಂಪನಿಗಳನ್ನು ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಉದ್ಯಮಿಗಳಿಗೆ ಸರಿಯಾದ ಸೌಲಭ್ಯಗಳನ್ನು ನೀಡುತ್ತಿಲ್ಲ. ಕೆಂಪೇಗೌಡರು, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವೇಗೌಡರು ಹಾಗೂ ಎಸ್.ಎಂ. ಕೃಷ್ಣ ಅವರಂತಹ ನಾಯಕರ ದೂರದೃಷ್ಟಿಯಿಂದ ಬೆಂಗಳೂರು ಬೆಳೆದಿದೆ. ಆ ಹಿಂದಿನ ಇಕೋ-ಸಿಸ್ಟಂ ನೋಡಿ ಇಂದಿಗೂ ಉದ್ಯಮಿಗಳು ಬರುತ್ತಿದ್ದಾರೆಯೇ ಹೊರತು, ಈ ಸರ್ಕಾರದ ಹೊಸ ವ್ಯವಸ್ಥೆಯನ್ನು ನೋಡಿ ಯಾರೂ ಬರುತ್ತಿಲ್ಲ,” ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ShareTweetSendShare
Join us on:

Related Posts

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

by Shwetha
November 6, 2025
0

ರಾಜ್ಯ ಸರ್ಕಾರವು ಅನುಕಂಪ ಆಧಾರದ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊಸ ಸ್ಪಷ್ಟನೆ ನೀಡಿದೆ. ಸರ್ಕಾರಿ ನೌಕರರು ಸಾವಿಗೀಡಾದ ಬಳಿಕ ಅವರ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ...

ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

by Shwetha
November 6, 2025
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೋಟ್‌ಚೋರಿ ಆರೋಪಕ್ಕೆ ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಯೋಗದ ಅಧಿಕಾರಿಗಳು ಈ ಆರೋಪವನ್ನು ಸಂಪೂರ್ಣ ಆಧಾರರಹಿತ ಹಾಗೂ ವಾಸ್ತವವಿಲ್ಲದ ಆರೋಪ ಎಂದು...

ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

by Shwetha
November 6, 2025
0

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳೊಂದಿಗೆ ವಾಗ್ದಾಳಿ ನಡೆಸಿದ್ದು, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಬೃಹತ್...

ಕಬ್ಬಿನ ದರ ಸಮರ: ಕೇಂದ್ರದ ಅಂಗಳಕ್ಕೆ ಚೆಂಡು ಎಸೆದ ಸಿದ್ದರಾಮಯ್ಯ

ಕಬ್ಬಿನ ದರ ಸಮರ: ಕೇಂದ್ರದ ಅಂಗಳಕ್ಕೆ ಚೆಂಡು ಎಸೆದ ಸಿದ್ದರಾಮಯ್ಯ

by Shwetha
November 6, 2025
0

ಬೆಂಗಳೂರು: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. "ಕಬ್ಬಿಗೆ ಗರಿಷ್ಠ ಚಿಲ್ಲರೆ...

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ: ಆರ್. ಅಶೋಕ್ ಆರೋಪ

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ: ಆರ್. ಅಶೋಕ್ ಆರೋಪ

by Shwetha
November 6, 2025
0

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳು ನಡೆದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram