ಲಾಯರ್ ಗಳ ರಕ್ಷಣೆಗಾಗಿ ಕಾನೂನು ರಚಿಸಿ : ಸಿದ್ದರಾಮಯ್ಯ ಆಗ್ರಹ
ಬೆಂಗಳೂರು : ದೇಶದಾದ್ಯಂತ ವಕೀಲರ ಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ನ್ಯಾಯವಾಗಿಗಳ ರಕ್ಷಣೆಗಾಗಿ ಕಾನೂನು ರಚಿಸುವಂತೆ ಸರ್ಕಾರವನ್ನ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಹೊಸಪೇಟೆ, ಹೈದರಾಬಾದ್ ಸೇರಿದಂತೆ ದೇಶದಾದ್ಯಂತ ನಡೆಯುತ್ತಿರುವ ವಕೀಲರ ಹತ್ಯೆ ಪ್ರಕರಣಗಳು ಕಳವಳಕಾರಿ ಬೆಳವಣಿಗೆ.
ವೈದ್ಯರ ರಕ್ಷಣೆಗಾಗಿ ಇರುವ ವಿಶೇಷ ಕಾಯ್ದೆಯ ಮಾದರಿಯಲ್ಲಿಯೇ ನ್ವಾಯವಾದಿಗಳ ರಕ್ಷಣೆಗಾಗಿ ಕಾನೂನು ರಚಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾಗಳನ್ನು ಆಗ್ರಹಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಬಳ್ಳಾರಿಯಲ್ಲಿ ಆಸ್ತಿ ವಿವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲೇ ವಕೀಲನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು.
ಇನ್ನ ನೆರೆಯ ಹೈದರಾಬಾದ್ ನಲ್ಲಿ ಹಳೆ ದ್ವೇಷ ಹಿನ್ನೆಲೆ ವಕೀಲ ದಂಪತಿಯನ್ನ ಅಟ್ಟಾಡಿಸಿಕೊಂಡು ಹೋಗಿ ಭೀಕರವಾಗಿ ಹತ್ಯೆಗೈದಿದ್ದರು.