ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್ : ರಮೇಶ್ ಜಾರಕಿಹೊಳಿ
ಬೆಳಗಾವಿ : ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್ ಅಂತಾ ಸಚಿವ ರಮೇಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.
ಗೋಕಾಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಮಾತನಾಡದಂತೆ ನನ್ನ ಹಿತೈಷಿಗಳು ನನಗೆ ವಾರ್ನಿಂಗ್ ಮಾಡಿದ್ದಾರೆ.
ಆಕೆ ಮಾರ್ಕೆಟಿಂಗ್ ವುಮೆನ್, ಏನೇ ಮಾಡಿದರೂ ಮಾರ್ಕೆಟಿಂಗ್ ಮಾಡಿಕೊಳ್ಳುತ್ತಾಳೆ ಅಂತಾ ರಮೇಶ್ ಜಾರಕಿಹೊಳಿ ಟೀಕಿಸಿದರು.
ಮಂತ್ರಿ ಮಾಡಿದ್ಯಾರು ಎಂಬ ವಿಚಾರವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನು ಯಾರು ಮಂತ್ರಿ ಮಾಡಿದ್ದಾರೆ ಅಂತಾ ಮುಂದೆ ಹೇಳ್ತೇನೆ.
ಸಿದ್ದರಾಮಯ್ಯರನ್ನ ಕೇಳಿ ನನ್ನ ಯಾರು ಮಂತ್ರಿ ಮಾಡಿದ್ದು ಎಂದು ಟಾಂಗ್ ನೀಡಿದರು.
ಇದೇ ವೇಳೆ ಮಹದಾಯಿ ವಿಚಾರವಾಗಿ ಮಾತನಾಡಿ, ಯೋಜನೆ ನಮ್ಮ ಪರವಾಗುವಂತೆ ಕೆಲಸ ಮಾಡಲಾಗುತ್ತಿದೆ.
ಗೋವಾ ಸುಳ್ಳು ಪ್ರಮಾಣ ಪತ್ರ ಮಾಡಿದ್ದರಿಂದ ಕೋರ್ಟ್ ವರದಿ ಕೇಳಿದೆ. ನಾವು ಯಾವುದೇ ಕಾನೂನು ಉಲ್ಲಂಘಣೆ ಮಾಡಿಲ್ಲ.
ಕೋರ್ಟ್ನಲ್ಲಿ ಗೋವಾ ಮತ್ತೊಮ್ಮೆ ಮುಖಭಂಗ ಅನುಭವಿಸಲಿದೆ ಅಂತಾ ರಮೇಶ್ ಜಾರಕಿಹೊಳಿ ಹೇಳಿದ್ರು.