ಮಂಡ್ಯ : ಸಿ.ಟಿ.ರವಿ, ಚಲುವರಾಯಸ್ವಾಮಿ ಇಸ್ಪೀಟ್ ಆಟದ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಫೋಟೋ ಚುನಾವಣೆ ಸಂದರ್ಭದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜೆಡಿಎಸ್ ಪೇಜ್ ಗಳಲ್ಲಿ ಪೋಟೋ ಕುರಿತು ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಬಿಜೆಪಿ ಜೊತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿದ್ದಕ್ಕೆ ಇದೇ ಸಾಕ್ಷಿ. ಬಿಜೆಪಿ ಬಿಟೀಂ ಯಾವುದು ಎಂದು ಗೊತ್ತಾಯ್ತಾ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.
ಇನ್ನೊಂದೆಡೆ ರಾಜಕೀಯ ವಲಯದಲ್ಲಿಯೂ ಇದು ದೊಡ್ಡ ಚರ್ಚೆಗೆ ಕಾರಣವಾಗಿದೆ. ಅಲ್ಲದೇ, ಇಲ್ಲಿ ಮಂಡ್ಯ ಜಿಲ್ಲೆಯ ರಾಜಕಾರಣದ ಕುರಿತು ಮಾತುಕತೆ ನಡೆಯುತ್ತಿದೆಯೇ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಆದರೆ, ಈ ಕುರಿತು ನಾಯಕರು ಮಾತ್ರ ಯಾವುದೇ ಸ್ಪಷ್ಟನೆ ನೀಡಿಲ್ಲ.