ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್ನಾನೇ: ಪ್ರತಾಪ ಸಿಂಹSaaksha Tv
ಮೈಸೂರು: ಮೈಸೂರು ಅಭಿವೃದ್ಧಿ ಮಾಡಿದ್ದು ನಾನು ಮೈಸೂರು ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್ ನಾನೇ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಘೋಷಿಸಿಕೊಂಡಿದ್ದಾರೆ.
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಹಾರಾಜರ ನಂತರ ಅತಿಹೆಚ್ಚು ಲೀಡ್ನಲ್ಲಿ ಗೆದ್ದಿರೋದು ನಾನು. ನನ್ನಿಂದಲೇ ಮೈಸೂರು ಅಭಿವೃದ್ಧಿ ಆಗಿರೋದು. ಶಾಸಕ ಎಲ್. ನಾಗೇಂದ್ರ ಅಭಿವೃದ್ಧಿ ಹರಿಕಾರ ಅನ್ನುವ ಭ್ರಮೆಯಲ್ಲಿದ್ದಾರೆ. 30 ಕೋಟಿ ರೂ. ಅನುದಾನ ತಂದಿಲ್ಲ. 300 ಕೋಟಿ ರೂ. ಕೆಲಸ ಅಂತ ಹೇಳುತ್ತಾರೆ. ಎಲ್ಲಿದೆ 300 ಕೋಟಿ ? ಅಂತ ಪ್ರಶ್ನಿಸಿದರು.
ಅಲ್ಲದೇ ಯಾವ ರಸ್ತೆ ಮಾಡಿದ್ದೀರಿ ಅಂತಾ ತೋರಿಸಿ. ಚಾಮರಾಜ ಕ್ಷೇತ್ರದ ಕೆ.ಆರ್. ಆಸ್ಪತ್ರೆಯಲ್ಲಿ ಸೊಳ್ಳೆ, ನಾಯಿ ಕಾಟ ಇದೆ. ನಿಮ್ಮ ಕ್ಷೇತ್ರದ ವಿಜಯನಗರದಲ್ಲಿ ವಾಟರ್ ಟ್ಯಾಂಕ್ ಹಾಕಿಸಿದ್ದು ನಾನು. ಪಾಸ್ ಪೊರ್ಟ್ ಸೇವಾ ಕೇಂದ್ರ ಮಾಡಿಸಿದ್ದು ನಾನು. ಶಾಸಕರು ಗೋವಾಕ್ಕೆ ಹೋಗುವ ಫ್ಲೈಟ್ ತಂದಿದ್ದು ನಾನು. ಬೆಂಗಳೂರು- ಮೈಸೂರು ಹೆದ್ದಾರಿ ಮಾಡಿಸಿದ್ದು ನಾನು ಎಂದು ಹೇಳಿದರು
ಹಾಗೇ ಕೆ.ಆರ್. ಕ್ಷೇತ್ರದ ಕಸದ ಸಮಸ್ಯೆ ನಿವಾರಿಸಿದ್ದು ನಾನು. ಶಾಸಕರು ರಿಯಲ್ ಎಸ್ಟೇಟ್ ಮಾಡಲಿ. ಆದರೆ ಕೃಷ್ಣರಾಜ, ಚಾಮರಾಜ ಕ್ಷೇತ್ರಗಳು ಅವರ ಬಡಾವಣೆಗಳಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಮ್ಮ ಸಾಧನೆಗಳ ದೊಡ್ಡ ಪಟ್ಟಿಯನ್ನೇ ಹರಿಯಬಿಟ್ಟಿದ್ದಾರೆ.
ಪ್ರಧಾನಿ ಮೋದಿಗಿಂತ ನಾಗೇಂದ್ರ, ರಾಮದಾಸ್ ಅನುಭವಿಗಳು. ಇವರಿಬ್ಬರೂ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಿ. ಯೋಜನೆ ಸರಿಯಿಲ್ಲ, ನಾವು ನಿಮಗಿಂತ ಹಿರಿಯರೆಂದು ಹೇಳಲಿ. ಯೋಜನೆ ರದ್ದು ಮಾಡುವಂತೆ ಪ್ರಧಾನಿಗೆ ಪತ್ರ ಬರೆಯಲಿ ಎಂದು ತಮ್ಮ ವಿರುದ್ಧ ಸಿಡಿದೆದ್ದಿರುವ ನಾಗೇಂದ್ರ ಮತ್ತು ರಾಮದಾಸ್ಗೆ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದ್ದಾರೆ.