ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ರಾಜ್ಯದ 5 ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ತನ್ನ ಪಟ್ಟಿ ಬಿಡುಗಡೆ ಮಾಡಿದೆ. ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ (Parishad Election) ಕಾಂಗ್ರೆಸ್ (Congress) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯೂರಿನ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮ ಅವರ ಪತಿ ಶ್ರೀನಿವಾಸ್ ಗೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗಷ್ಟೇ ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರಿದ್ದರು. ಸೇರಿದ ಒಂದು ವಾರದಲ್ಲಿಯೇ ಟಿಕೆಟ್ ಪಡೆದಿದ್ದಾರೆ. ಶ್ರೀನಿವಾಸ್ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಘೋಷಿಸಲಾಗಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿಟಿ ಶ್ರೀನಿವಾಸ್
ಬೆಂಗಳೂರು ಶಿಕ್ಷಕರ ಕ್ಷೇತ್ರ – ಪುಟ್ಟಣ್ಣ
ಈಶಾನ್ಯ ಪದವೀಧರರು ಕ್ಷೇತ್ರ – ಡಾ. ಚಂದ್ರಶೇಖರ ಬಿ. ಪಾಟೀಲ್
ಬೆಂಗಳೂರು ಪದವೀಧರರ ಕ್ಷೇತ್ರ – ರಾಮೋಜಿ ಗೌಡ
ನೈಋತ್ಯ ಶಿಕ್ಷಕರ ಕ್ಷೇತ್ರ – ಕೆಕೆ ಮಂಜುನಾಥ್ ಟಿಕೆಟ್ ಪಡೆದಿದ್ದಾರೆ.