ಮೋದಿ ಪ್ರಾಮಾಣಿಕರಾಗಿದ್ದರೆ ಭ್ರಷ್ಟ ಬಿಜೆಪಿ ಸರ್ಕಾರವನ್ನು ವಜಾ ಮಾಡಲಿ : ಸಿದ್ದರಾಮಯ್ಯ
Siddaramaiah saaksha tv
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕರಾಗಿದ್ದರೆ ಭ್ರಷ್ಟ ಬಿಜೆಪಿ ಸರ್ಕಾರವನ್ನು ವಜಾ ಮಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಸರ್ಕಾರ 40% ಕಮಿಷನ್ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿ ಒಂದು ಲಕ್ಷ ಗುತ್ತಿಗೆದಾರರು ಸದಸ್ಯರಾಗಿರುವ ಸಂಘದವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕರಾಗಿದ್ದರೆ ಭ್ರಷ್ಟ ಬಿಜೆಪಿ ಸರ್ಕಾರವನ್ನು ವಜಾ ಮಾಡಲಿ.
ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ನಡೆದಿರುವ ಟೆಂಡರ್ ಗಳೂ ಸೇರಿ ಈವರೆಗಿನ ಎಲ್ಲಾ ಟೆಂಡರ್ ಪ್ರಕ್ರಿಯೆಗಳ ಬಗ್ಗೆ ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಲಿ. ಉಪ್ಪು ತಿಂದವರು ನೀರು ಕುಡೀತಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗುತ್ತೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ 40% ಕಮಿಷನ್ ಪ್ರಕರಣದ ತನಿಖೆಗೆ ಆದೇಶ ಮಾಡಿದ್ದಾರೆ. ಆದರೆ ಯಾವ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ ಇದೆಯೋ ಅದೇ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ನೇಮಿಸಿದರೆ ಸತ್ಯ ಹೊರಬರುತ್ತದಾ..?
ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಾವು ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಬೆಂಬಲಿತರಿಗೆ, ಪಕ್ಷದ ಅಭ್ಯರ್ಥಿಗೆ ಒಂದು ಮತ ಮಾತ್ರ ಹಾಕಲು ಸೂಚನೆ ಕೊಟ್ಟಿದ್ದೇನೆ. ಆದರೆ ಬೇರೆ ಚುನಾವಣೆಗಳಂತೆ ಈ ಚುನಾವಣೆಯಲ್ಲೂ ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ನಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.