ಭಗತ್ ಸಿಂಗ್ ಪ್ರತಿಮೆ ನಿರ್ಮಾಣ ಮಾಡಲು ರಕ್ತದಲ್ಲಿ ಪ್ರಧಾನಿಗೆ ಪತ್ರ
ಹುಬ್ಬಳ್ಳಿ: ಶಹೀದ್ ಭಗತ್ ಸಿಂಗ್ ಪ್ರತಿಮೆಯನ್ನು ನಿರ್ಮಾಣ ಮಾಡಬೇಕೆಂದು ಭಗತ್ ಸಿಂಗ್ ಅಭಿಮಾನಿ ಒಬ್ಬರು ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಹುಬ್ಬಳ್ಳಿಯ ಹುಬ್ಬಳ್ಳಿಯ ಹೊಸೂರಿನ ಗಾಳಿ ದುರ್ಗಮ್ಮ ದೇವಿಯ ದೇವಸ್ಥಾನದ ಹತ್ತಿರದಲ್ಲಿರುವ ಜಾಗದಲ್ಲಿ ಭಗತಸಿಂಗ್ ಅವರ ಪುತ್ಥಳಿಯನ್ನು ನಿರ್ಮಾಣ ಮಾಡಬೇಕು ಎಂದು ಭಗತ್ ಸಿಂಗ್ ಅಭಿಮಾನಿ ಶ್ರೀಧರಸಿಂಗ ಸಾಂಗ್ಲಿಕರ್ ಒತ್ತಾಯಿಸಿದ್ದಾರೆ
ಶ್ರೀಧರಸಿಂಗ ಸಾಂಗ್ಲಿಕರ್ ಭಗತ್ ಸಿಂಗ್ ಅಭಿಮಾನಿಯೊಬ್ಬರು ತಮ್ಮ ಜನ್ಮ ದಿನದ ಪ್ರಯುಕ್ತ ಪ್ರಧಾನಮಂತ್ರಿಗೆ ರಕ್ತದ ಮೂಲಕ ಪತ್ರ ಬರೆಯುವ ಮೂಲಕ ಒಂದು ಮನವಿ ಮಾಡಿದ್ದಾರೆ.
ರಕ್ತದಲ್ಲಿ ಪತ್ರ ಬರೆದ ಭಗತಸಿಂಗ್ ಯುವಕ ಮಂಡಳದ ಅಧ್ಯಕ್ಷ ಶ್ರೀಧರ ಸಾಂಗ್ಲಿಕರ್, ಭಗತಸಿಂಗ್ ಅವರ ಮೇಲಿನ ಅಪಾರ ಅಭಿಮಾನದಿಂದ ಈ ಕಾರ್ಯ ಕೈಗೊಂಡಿರುವುದಾಗಿ ಹೇಳಿದ್ದಾರೆ. ಜೊತೆಗೆ ಮುಂಬರುವ ಪೀಳಿಗೆಗೆ ಭಗತಸಿಂಗ್ ಅವರ ಆದರ್ಶಗಳನ್ನು ಪರಿಚಯಿಸುವ ಸದುದ್ದೇಶದಿಂದ ಪ್ರಧಾನಿ ಮೋದಿಗೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ.