ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಕೊಲೆ ಆರೋಪ ಸಾಬೀತಾದ ಹಿನ್ನೆಲೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆಯಾಗಿದ್ದು, ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು.
ಈ ಪ್ರಕರಣದಲ್ಲಿ ಮೊನ್ನೆ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳನ್ನು ದೋಷಿ ಎಂದು ಘೋಷಿಸಿತ್ತು. ಇದೀಗ ಅಂತಿಮವಾಗಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿ, ಜೀವಾವಧಿ ಶಿಕ್ಷೆ ವಿಧಿಸಿದೆ.
ಸುಮಾರು ಒಂದು ದಶಕದ ತನಿಖೆ ಮತ್ತು ವಿಚಾರಣೆ ಬಳಿಕ ಬಂದ ಈ ತೀರ್ಪು, ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವಾಗಿ ಪರಿಗಣಿಸಲಾಗಿದೆ.
ಇದರಿಂದ ಕಾಂಗ್ರೆಸ್ ಪಕ್ಷಕ್ಕೂ ರಾಜಕೀಯವಾಗಿ ಒತ್ತಡ ಹೆಚ್ಚುವ ಸಾಧ್ಯತೆ ಇದೆ.








