ಗದಗ: ಯೋಗೇಶ್ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ಲಿಂಗಾಯತ ಮಠಾಧೀಶರು ಬ್ಯಾಟಿಂಗ್ ಮಾಡಿದ್ದಾರೆ.
ಹಲವು ಲಿಂಗಾಯತ ಮಠಾಧೀಶರು ದಿಡೀರ್ ಗದಗ್ನ ತೋಂಟದ ಸಿದ್ದಲಿಂಗ ಮಠಕ್ಕೆ ಆಗಮಿಸಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವ ಕ್ರಮವನ್ನು ಖಂಡಿಸಿ ಚರ್ಚೆ ನಡೆಸಿರುವ ಲಿಂಗಾಯತ ಮಠಾಧೀಶರು, ವಿನಯ್ ಕುಲಕರ್ಣಿ ಅವರಿಗೆ ನೈತಿಕ ಬೆಂಬಲ ನೀಡುವ ಮೂಲಕ ಬ್ಯಾಟಿಂಗ್ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಗದಗ್ನ ತೋಂಟದಾರ್ಯ ಸಿದ್ದರಾಮ ಶ್ರೀಗಳು, ಇತರೆ ಮಠಾಧೀಶರು ನಮ್ಮ ಮಠಕ್ಕೆ ಯಾಕೆ ಬಂದಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕೊಲೆ ಆದ ಯೋಗೇಶ್ ಗೌಡ ಹಾಗೂ ವಿನಯ್ ಕುಲಕರ್ಣಿ ಇಬ್ಬರು ಲಿಂಗಾಯರು. ಜಾತಿ-ಮತ-ಪಂಥ ಯಾವುದು ಸಂಬಂಧವಿಲ್ಲ. ಆದರೆ, ನ್ಯಾಯಾಂಗ ವಿಚಾರಣೆ ನಡೆದಿದ್ದರಿಂದ ನ್ಯಾಯ ಸಮ್ಮತವಾಗಿ ನಡೆಯಬೇಕು ಎಂದು ಒತ್ತಾಯಿಸಿದರು.
ವಿನಯ್ ಕುಲಕರ್ಣಿ ಅಪರಾಧಿಯಲ್ಲ, ಆರೋಪಿ ಅಷ್ಟೇ. ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ, ಅದು ನ್ಯಾಯ ಸಮ್ಮತವಾಗಿರಲಿ. ನಮಗೂ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಪಾರವಾದ ಗೌರವವಿದೆ. ಸಿಬಿಐ ಅಧಿಕಾರಿಗಳು ನ್ಯಾಯಯುತವಾದ ವಿಚಾರಣೆ ನಡೆಸುತ್ತಾರೆಂಬ ಆಶಾ ಭಾವನೆ ನಮ್ಮದಾಗಿದೆ. ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಗಬೇಕು ಎಂಬ ಆಶಾ ಭಾವನೆ ನಮ್ಮದು ಎಂದು ಸಿದ್ದರಾಮ ಮಹಾಸ್ವಾಮಿಜಿ ಹೇಳಿದ್ದಾರೆ.
ನ್ಯಾಯಾಂಗ ವ್ಯವಸ್ಥೆಯಲ್ಲಿ ಯಾರು ಹಸ್ತಕ್ಷೇಪ ಮಾಡಬಾರದು. ಯಾವುದೇ ರಾಜಕೀಯ ಹಸ್ತಕ್ಷೇಪ ಕೂಡನಡೆಯಬಾರದು ಎಂದು ತೋಂಟದಾರ್ಯ ಮಠದ ಸಿದ್ದರಾಮ ಮಹಾಸ್ವಾಮಿಜಿ ತಿಳಿಸಿದ್ದಾರೆ.
ರಾಜಕೀಯ ದುರುದ್ದೇಶದಿಂದ ಬಂಧನ-ಸಂತೋಷ್ ಲಾಡ್
ರಾಜಕೀಯ ದುರುದ್ದೇಶದಿಂದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬಂಧಿಸಲಾಗಿದೆ. ವಿನಯ್ ಕುಲಕರ್ಣಿ ಅವರ ಬಂಧನ ದುರಾದೃಷ್ಟ, ಇನ್ನೋಬ್ಬರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ವಿನಯ್ ಕುಲಕರ್ಣಿ ಬಂಧನ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಪ್ರತಿಕ್ರಿಯೆ ನೀಡಿದ ಸಂತೋಷ್ ಲಾಡ್, ನ್ಯಾಯಾಂಗ ವ್ಯವಸ್ಥೆಗೆ ನಾವು ಗೌರವ ನೀಡುತ್ತೇವೆ. ಎಲ್ಲದಕ್ಕೂ ಉತ್ತರ ಸಿಗುತ್ತದೆ. ರಾಹುಲ್ ಗಾಂಧಿಯವರನ್ನು ಕೂಡ ರಾಜಕೀಯ ದುರುದ್ದೇಶದಿಂದ ಬಿಜೆಪಿ ಕಾಡುತ್ತಿದೆ.
ಅಧಿಕಾರ ಶಾಶ್ವತ ಎನ್ನುವಂತೆ ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಅಧಿಕಾರ ಶಾಶ್ವತವಲ್ಲ, ಎಲ್ಲವೂ ಬದಲಾವಣೆ ಯಾಗುತ್ತದೆ. ಎಲ್ಲ ಬೆಳವಣಿಗೆಗಳು ರಾಜಕೀಯ ದುರುದ್ದೇಶದಿಂದ ನಡೆಯುತ್ತಿವೆ ಎಂದು ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಬಿಐ ಅಧಿಕಾರಿಗಳಿಂದ ಎಸ್.ಎನ್.ಗೌಡರ್ ವಿಚಾರಣೆ
ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ವಿಚಾರಣೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು, ಎಸ್.ಎನ್. ಗೌಡರ್ರನ್ನು ವಿಚಾರಣೆಗೆ ಗುರಿಪಡಿಸಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯತ್ ಇಂಜಿನಿಯರ್ ಆಗಿದ್ದ ಎಸ್.ಎನ್. ಗೌಡರ್, ಜಿಲ್ಲಾ ಪಂಚಾಯತ್ ಚುನಾವಣೆ ವೇಳೆ ನೋಡಲ್ ಅಧಿಕಾರಿಯಾಗಿದ್ದರು.
ಯೋಗೇಶ್ಗೌಡ ವಿರುದ್ಧ ಎಸ್.ಎನ್. ಗೌಡರ್ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ್ದರು.
ವಿನಯ ಕುಲಕರ್ಣಿ ಸೂಚನೆಯಂತೆ ದೂರು ದಾಖಲಿಸಿದ್ದ ಆರೋಪವಿದೆ. ಯೋಗೇಶ್ಗೌಡ ವಿರುದ್ಧ ದೂರು ನೀಡುವಂತೆ ಎಸ್.ಎನ್. ಗೌಡರ್ ಮೇಲೆ ವಿನಯ ಕುಲಕರ್ಣಿ ಒತ್ತಡ ಹಾಕಿದ್ದರು ಎನ್ನಲಾಗಿದೆ. ಆದರೆ, ಸಿಬಿಐ ವಿಚಾರಣೆ ವೇಳೆ ನಾನು ಒತ್ತಡ ಹೇರಿರಲಿಲ್ಲ ಎಂದು ವಿನಯ ಕುಲಕರ್ಣಿ ಹೇಳಿದ್ದು, ಇಬ್ಬರನ್ನೂ ಮುಖಾಮುಖಿ ಕೂರಿಸಿ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel